<p><strong>ಕುಷ್ಟಗಿ:</strong> ಬಹುಕಮಾನು ಚೆಕ್ಡ್ಯಾಂ ನಿರ್ಮಾಣ ಕಾಮಗಾರಿ ಹಗರಣಕ್ಕೆ ಸಂಬಂಧಿಸಿದಂತೆ ₹ 1.51 ಕೋಟಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ನಾಲ್ವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.</p>.<p>ಈ ಕುರಿತು ಶುಕ್ರವಾರ ಸಂಜೆ ಆದೇಶ ಹೊರಡಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ ಮೂರ್ತಿ, ಸಂಬಂಧಿಸಿದ ಪಿಡಿಒಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದ್ದಾರೆ.</p>.<p>ಹಿರೇಗೊಣ್ಣಾಗರ ಪಂಚಾಯಿತಿಯ ಯಮನಪ್ಪ ರಾಮತನಾಳ, ಮುದೇನೂರು ಪಂಚಾಯಿತಿ ವೆಂಕಟೇಶ್, ಹಾಬಲಕಟ್ಟಿಯ ಪಂಚಾಯಿತಿಯ ಚಂದಪ್ಪ ಕವಡಿಕಾಯಿ ಹಾಗೂ ತಳುವಗೇರಾ ಪಂಚಾಯಿತಿಯ ಶಿವಪುತ್ರಪ್ಪ ಬರಿದೆಲಿ ಅಮಾನತುಗೊಂಡ ಅಭಿವೃದ್ಧಿ ಅಧಿಕಾರಿಗಳು. ಹಗರಣ ತನಿಖಾ ಹಂತದಲ್ಲಿದ್ದರೂ ಈ ಪಿಡಿಒಗಳು ಗುತ್ತಿಗೆದಾರರಿಗೆ ಸಾಮಗ್ರಿ ವೆಚ್ಚ (ಬಿಒಸಿ) ಪಾವತಿಸಿದ್ದಾರೆ ಎಂದು ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಬಹುಕಮಾನು ಚೆಕ್ಡ್ಯಾಂ ನಿರ್ಮಾಣ ಕಾಮಗಾರಿ ಹಗರಣಕ್ಕೆ ಸಂಬಂಧಿಸಿದಂತೆ ₹ 1.51 ಕೋಟಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ನಾಲ್ವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.</p>.<p>ಈ ಕುರಿತು ಶುಕ್ರವಾರ ಸಂಜೆ ಆದೇಶ ಹೊರಡಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ ಮೂರ್ತಿ, ಸಂಬಂಧಿಸಿದ ಪಿಡಿಒಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದ್ದಾರೆ.</p>.<p>ಹಿರೇಗೊಣ್ಣಾಗರ ಪಂಚಾಯಿತಿಯ ಯಮನಪ್ಪ ರಾಮತನಾಳ, ಮುದೇನೂರು ಪಂಚಾಯಿತಿ ವೆಂಕಟೇಶ್, ಹಾಬಲಕಟ್ಟಿಯ ಪಂಚಾಯಿತಿಯ ಚಂದಪ್ಪ ಕವಡಿಕಾಯಿ ಹಾಗೂ ತಳುವಗೇರಾ ಪಂಚಾಯಿತಿಯ ಶಿವಪುತ್ರಪ್ಪ ಬರಿದೆಲಿ ಅಮಾನತುಗೊಂಡ ಅಭಿವೃದ್ಧಿ ಅಧಿಕಾರಿಗಳು. ಹಗರಣ ತನಿಖಾ ಹಂತದಲ್ಲಿದ್ದರೂ ಈ ಪಿಡಿಒಗಳು ಗುತ್ತಿಗೆದಾರರಿಗೆ ಸಾಮಗ್ರಿ ವೆಚ್ಚ (ಬಿಒಸಿ) ಪಾವತಿಸಿದ್ದಾರೆ ಎಂದು ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>