<p><strong>ಕೊಪ್ಪಳ</strong>: ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಮಠದ ವತಿಯಿಂದಲೇ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. </p>.<p>ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸ್ಥಳೀಯ ವೈದ್ಯಕೀಯ ಸಿಬ್ಬಂದಿ ಸಹಯೋಗದೊಂದಿಗೆ ಔಷಧಿ ಹಾಗೂ ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.</p>.<p>ವಿಶೇಷವಾಗಿ ಜಾತ್ರೆಯ ಆವರಣ, ಪ್ರಸಾದ ನಿಲಯ, ಪೊಲೀಸ್ ಚೌಕಿ ಹತ್ತಿರ 24 ತಾಸು ತುರ್ತು ವೈದ್ಯಕೀಯ ಚಿಕಿತ್ಸೆ ಇರುತ್ತದೆ. ಜ. 1ರಿಂದ 18ರ ತನಕ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 12ರ ತನಕ ಜಾರಿಯಲ್ಲಿರುತ್ತದೆ. ರಾತ್ರಿ 12 ಗಂಟೆಯ ನಂತರ ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿರುತ್ತದೆ. ಕೆ.ಎಸ್. ಆಸ್ಪತ್ರೆ, ಜಿಲ್ಲಾಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆ ವ್ಯವಸ್ಥೆ ಇರುತ್ತದೆ.</p>.<p>ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯ ಚಿಕಿತ್ಸಕರು, ಆಯುರ್ವೇದ ಮಹಾವಿದ್ಯಾಲಯದ 32 ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು 100, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಪರಿಣಿತ 10 ವೈದ್ಯರು, ಮೂರು ಅಂಬುಲೆನ್ಸ್ ಇರುತ್ತದೆ. ಆಂಬುಲೆನ್ಸ್ ವವಸ್ಥೆಗಾಗಿ 9632002808, 9741624504, 8747926455 ಅಥವಾ 8088939400 ಸಂಪರ್ಕಿಸಬಹುದು.</p>.<p>ಹೆಚ್ಚಿನ ಮಾಹಿತಿಗಾಗಿ ಡಾ. ಗುರುರಾಜ್ (9480193373), ಡಾ ಎಂ. ಸೂರ್ಯನಾರಾಯಣ (9845631442), ಡಾ. ಎಸ್.ಎಂ. ಸಾಲಿಮಠ (9845010950), ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ (08539 -221989) ಸಂಪರ್ಕಿಸುವಂತೆ ಗವಿಮಠದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಮಠದ ವತಿಯಿಂದಲೇ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. </p>.<p>ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸ್ಥಳೀಯ ವೈದ್ಯಕೀಯ ಸಿಬ್ಬಂದಿ ಸಹಯೋಗದೊಂದಿಗೆ ಔಷಧಿ ಹಾಗೂ ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.</p>.<p>ವಿಶೇಷವಾಗಿ ಜಾತ್ರೆಯ ಆವರಣ, ಪ್ರಸಾದ ನಿಲಯ, ಪೊಲೀಸ್ ಚೌಕಿ ಹತ್ತಿರ 24 ತಾಸು ತುರ್ತು ವೈದ್ಯಕೀಯ ಚಿಕಿತ್ಸೆ ಇರುತ್ತದೆ. ಜ. 1ರಿಂದ 18ರ ತನಕ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 12ರ ತನಕ ಜಾರಿಯಲ್ಲಿರುತ್ತದೆ. ರಾತ್ರಿ 12 ಗಂಟೆಯ ನಂತರ ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿರುತ್ತದೆ. ಕೆ.ಎಸ್. ಆಸ್ಪತ್ರೆ, ಜಿಲ್ಲಾಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆ ವ್ಯವಸ್ಥೆ ಇರುತ್ತದೆ.</p>.<p>ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯ ಚಿಕಿತ್ಸಕರು, ಆಯುರ್ವೇದ ಮಹಾವಿದ್ಯಾಲಯದ 32 ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು 100, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಪರಿಣಿತ 10 ವೈದ್ಯರು, ಮೂರು ಅಂಬುಲೆನ್ಸ್ ಇರುತ್ತದೆ. ಆಂಬುಲೆನ್ಸ್ ವವಸ್ಥೆಗಾಗಿ 9632002808, 9741624504, 8747926455 ಅಥವಾ 8088939400 ಸಂಪರ್ಕಿಸಬಹುದು.</p>.<p>ಹೆಚ್ಚಿನ ಮಾಹಿತಿಗಾಗಿ ಡಾ. ಗುರುರಾಜ್ (9480193373), ಡಾ ಎಂ. ಸೂರ್ಯನಾರಾಯಣ (9845631442), ಡಾ. ಎಸ್.ಎಂ. ಸಾಲಿಮಠ (9845010950), ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ (08539 -221989) ಸಂಪರ್ಕಿಸುವಂತೆ ಗವಿಮಠದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>