ಹಲವು ಗೆಳೆಯರು ಹಾಗೂ ಶರಣಪ್ಪ ಗುಂಗಾಡಿ ಸೇರಿ ಕಿರಾಣಿ ಅಂಗಡಿ ತೆರೆದು ವ್ಯವಹಾರ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಕುಳಿತಲ್ಲಿಯೇ ವ್ಯವಹಾರ ನಡೆಸಿ ಆರ್ಥಿಕವಾಗಿ ಸಬಲರಾಗುವಂತೆ ಮಾಡಿದ್ದಾರೆ. ಬೆಂಗಳೂರಿ
ನಲ್ಲಿರುವ ಸೋಮನಾಥನ ಗೆಳೆಯರಾದ ಮುನ್ನಾಬಾಯಿ ಹಾಗೂ ಮಂಜುನಾಥ ಅಂಗಡಿ ಶೆಡ್ ನಿರ್ಮಿಸಿಕೊಟ್ಟಿದ್ದಾರೆ. ಗ್ರಾಮದ ಗೆಳೆಯರು ಹಾಗೂ ಶರಣಪ್ಪ ಗುಂಗಾಡಿ ₹20 ಸಾವಿರ ಆರ್ಥಿಕ ನೆರವು ನೀಡಿ ಅಂಗಡಿ ಸಾಮಗ್ರಿ ಖರೀದಿಗೆ ನೆರವಾಗಿದ್ದಾರೆ. ಅಲ್ಲದೇ ವಿವಿಧ ರೀತಿಯಲ್ಲಿ ಗೆಳೆಯರೆಲ್ಲರೂ ಪ್ರೋತ್ಸಾಹಿಸಿ ಆತ್ಮಸ್ಥೈರ್ಯದಿಂದ ಜೀವನ ನಡೆಸಿಕೊಂಡು ಹೋಗಲಿ ಎಂದು ದಾರಿಮಾಡಿಕೊಟ್ಟಿದ್ದಾರೆ.