ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಧಾನ ಕಚೇರಿಯ ನಿರ್ದೇಶಕ ರಾಜೇಶಗೌಡ, ಗಂಗಾವತಿ ಎಪಿಎಂಸಿಯ ಪ್ರಭಾರ ಕಾರ್ಯದರ್ಶಿ ವಿರುದ್ಧ ಇಲಾಖಾವಾರು ತನಿಖೆಗೆ ಅಧಿಕಾರಿಯನ್ನು ನಿಯೋಜಿಸಿದ್ದಾರೆ.
ಇದಕ್ಕೂ ಮೊದಲು ಎಪಿಎಂಸಿಯ ಕೆಲ ಸದಸ್ಯರು ಬೆಂಗಳೂರಿಗೆ ತೆರಳಿ, ಕಾರ್ಯದರ್ಶಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಕರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹುಬ್ಬಳ್ಳಿ ಜಂಟಿ ನಿರ್ದೇಶಕನಾಗೇಶ ವಿಚಾರಣಾ ಅಧಿಕಾರಿಯಾಗಿ ನೇಮಕವಾಗಿದ್ದು, ಗುರುವಾರ ಇಲ್ಲಿನ ಎಪಿಎಂಸಿಗೆ ಭೇಟಿ ನೀಡಿ ಪ್ರಾಥಮಿಕ ಹಂತದ ಮಾಹಿತಿ ಕಲೆ ಹಾಕಿದರು ಎಂದು ತಿಳಿದು ಬಂದಿದೆ.