ನಾಲ್ಕೈದು ದಿನಗಳಿಂದ ನೀರಿನ ಅಭಾವ ತಲೆದೂರಿದ್ದು, ಬಳಸಲು ಬಿಡಿ ಕುಡಿಯಲು ಕೂಡ ನೀರು ಸಿಗುತ್ತಿಲ್ಲ. ಗ್ರಾಮ ಪಂಚಾಯಿತಿ ಪಿಡಿಒ ಗಮನಕ್ಕೆ ತಂದರೂ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಟ್ಯಾಂಕರ್ಗಳ ಮೂಲಕವಾದರೂ ಕುಡಿಯಲು ನೀರಿನ ವ್ಯವಸ್ಥೆ ಕೂಡ ಮಾಡಿಲ್ಲ.ಕರೆಯನ್ನು ಸ್ವೀಕರಿಸುವುದಿಲ್ಲ. ಸಮಸ್ಯೆ ಪರಿಹರಿಸದಿದ್ದರೆ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ವಾಲ್ಮೀಕಿ ಯುವಪಡೆಯ ಅಧ್ಯಕ್ಷ ಯಮನೂರಪ್ಪ ಆರ್ ಅಬ್ಬಿಗೇರಿ ಎಚ್ಚರಿಕೆ ನೀಡಿದ್ದಾರೆ.