<p><strong>ಯಲಬುರ್ಗಾ:</strong> ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಯುಕ್ತ ಭಾವಚಿತ್ರಕ್ಕೆ ವಿಶೇಷ ಗೌರವ ಸಲ್ಲಿಸಲಾಯಿತು. </p>.<p>ನೇತೃತ್ವ ವಹಿಸಿದ್ದ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿ, ‘ಗಾಂಧಿ ಜಯಂತಿಯನ್ನು ಅಹಿಂಸಾ ದಿನವನ್ನಾಗಿ ಆಚರಿಸುವ ಮೂಲಕ ಗಾಂಧಿಯವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುತ್ತದೆ. ಗಾಂಧೀಜಿಯವರು ಅಂಹಿಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಶ್ರಮಿಸಿದ್ದನ್ನು ಸ್ಮರಿಸಬಹುದು. ಅನೇಕ ಮಾರ್ಗಗಳಲ್ಲಿ ಗಾಂಧೀಜಿಯವರು ಈ ಮಾರ್ಗವನ್ನು ಬಲವಾಗಿ ನಂಬಿ ಅದರಂತೆ ನಡೆದುಕೊಂಡಿದ್ದರು’ ಎಂದರು. </p>.<p>‘ದೇಶಕಂಡ ಅತ್ಯಂತ ಶ್ರೇಷ್ಠ ರಾಜಕಾರಣಿಯಾಗಿದ್ದ ಶಾಸ್ತ್ರಿಯವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದ ಶಾಸ್ತ್ರಿಯವರಂತರು ಸಿಗುವುದು ತೀರಾ ಅಪರೂಪ. ಅಂತಹ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆಯೇ ಒಂದು ಸೌಭಾಗ್ಯ’ ಎಂದು ನುಡಿದರು. </p>.<p>ಕುಕನೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಪಾಟೀಲ, ಶಿರಸ್ತೇದಾರ ಎಂ.ದೇವರಡ್ಡಿ, ಭೂ ಮಾಪನ ಸಹಾಯಕ ಅಧಿಕಾರಿ ಪುಂಡಲೀಕಪ್ಪ ಕುಂಬಾರ, ಶ್ರುತಿ ಮಾಕಾಪುರ, ಶ್ರುತಿ ಕಲ್ಮಠ, ಆಹಾರ ನಿರೀಕ್ಷಕ ಹನುಮಗೌಡ ಪಾಟೀಲ್, ರೇಹಮಾನ್ ರೇವಡಿ, ಶ್ರೀಕಾಂತಗೌಡ ಮಾಲಿಪಾಟೀಲ್ ಸೇರಿ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಯುಕ್ತ ಭಾವಚಿತ್ರಕ್ಕೆ ವಿಶೇಷ ಗೌರವ ಸಲ್ಲಿಸಲಾಯಿತು. </p>.<p>ನೇತೃತ್ವ ವಹಿಸಿದ್ದ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿ, ‘ಗಾಂಧಿ ಜಯಂತಿಯನ್ನು ಅಹಿಂಸಾ ದಿನವನ್ನಾಗಿ ಆಚರಿಸುವ ಮೂಲಕ ಗಾಂಧಿಯವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುತ್ತದೆ. ಗಾಂಧೀಜಿಯವರು ಅಂಹಿಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಶ್ರಮಿಸಿದ್ದನ್ನು ಸ್ಮರಿಸಬಹುದು. ಅನೇಕ ಮಾರ್ಗಗಳಲ್ಲಿ ಗಾಂಧೀಜಿಯವರು ಈ ಮಾರ್ಗವನ್ನು ಬಲವಾಗಿ ನಂಬಿ ಅದರಂತೆ ನಡೆದುಕೊಂಡಿದ್ದರು’ ಎಂದರು. </p>.<p>‘ದೇಶಕಂಡ ಅತ್ಯಂತ ಶ್ರೇಷ್ಠ ರಾಜಕಾರಣಿಯಾಗಿದ್ದ ಶಾಸ್ತ್ರಿಯವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಹೆಸರಾಗಿದ್ದ ಶಾಸ್ತ್ರಿಯವರಂತರು ಸಿಗುವುದು ತೀರಾ ಅಪರೂಪ. ಅಂತಹ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆಯೇ ಒಂದು ಸೌಭಾಗ್ಯ’ ಎಂದು ನುಡಿದರು. </p>.<p>ಕುಕನೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಪಾಟೀಲ, ಶಿರಸ್ತೇದಾರ ಎಂ.ದೇವರಡ್ಡಿ, ಭೂ ಮಾಪನ ಸಹಾಯಕ ಅಧಿಕಾರಿ ಪುಂಡಲೀಕಪ್ಪ ಕುಂಬಾರ, ಶ್ರುತಿ ಮಾಕಾಪುರ, ಶ್ರುತಿ ಕಲ್ಮಠ, ಆಹಾರ ನಿರೀಕ್ಷಕ ಹನುಮಗೌಡ ಪಾಟೀಲ್, ರೇಹಮಾನ್ ರೇವಡಿ, ಶ್ರೀಕಾಂತಗೌಡ ಮಾಲಿಪಾಟೀಲ್ ಸೇರಿ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>