<p><strong>ಕೊಪ್ಪಳ:</strong> ‘ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸಿ ಒಂದು ವರ್ಷ ಪೂರ್ಣಗೊಳ್ಳುವುದರ ಒಳಗೆ ರಾಜ್ಯದಾದ್ಯಂತ ಗಾಂಧೀಜಿ ಭೇಟಿ ನೀಡಿದ ಸ್ಥಳ ಅಥವಾ ಆ ಜಿಲ್ಲೆಯಲ್ಲಿ ಅವರ ಪುತ್ಥಳಿ ಸಮೇತ ಸ್ತಂಭ ನಿರ್ಮಾಣ ಮಾಡಲಾಗುವುದು’ ಎಂದು ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆದ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.ಧಾರವಾಡ ಕವಿಸಂ ಸರ್ಕಾರಕ್ಕೆ ವರ್ಷಕ್ಕೆರಡು ವರದಿಗಳನ್ನು ನೀಡಬೇಕು: ಎಚ್.ಕೆ. ಪಾಟೀಲ.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ ‘ಶತಮಾನೋತ್ಸವ ಕಾರ್ಯಕ್ರಮದ ವೇಳೆ ಅಂದುಕೊಂಡಂತೆ ಗಾಂಧಿ ಭಾರತ ಯಾತ್ರೆಯ ಕಾರ್ಯಕ್ರಮಗಳನ್ನು ಅ. 2ರ ಒಳಗೆ ಪೂರ್ಣಗೊಳಿಸಬೇಕಿತ್ತು. ಸಾಧ್ಯವಾಗದ ಕಾರಣ ದಿನಾಂಕ ವಿಸ್ತರಣೆ ಮಾಡಿದ್ದೇವೆ’ ಎಂದರು. </p><p><strong>ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣ:</strong> ಅಂಜನಾದ್ರಿ ಬೆಟ್ಟದ ಅಭಿವೃದ್ದಿಗಾಗಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಎಚ್.ಕೆ.ಪಾಟೀಲ್ ಹೇಳಿದರು.</p>.ಬೆಂಗಳೂರು| ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಪರಿಶೀಲನೆ: ಸಚಿವ ಎಚ್.ಕೆ. ಪಾಟೀಲ . <p>‘ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಮೋರೇರ್ ತಟ್ಟೆಯ ಪ್ರದೇಶವನ್ನು ಯೂನಸ್ಕೊ ಪಟ್ಟಿಗೆ ಸೇರಿಸುವ ಬಗ್ಗೆ ಪ್ರಯತ್ನ ನಡೆದಿದ್ದು, ಇದಕ್ಕೆ ಪೂರಕವಾಗಿ ಬೆಂಗಳೂರಿನ ಬಾಂಕ್ವೆಟ್ ಹಾಲ್ನಲ್ಲಿ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ’ ಎಂದರು.</p><p>ಉತ್ತರಾಧಿಕಾರಿ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಪಕ್ಷದ ವೇದಿಕೆಯಲ್ಲಿ ಮಾತ್ರ ಈ ವಿಚಾರ ಮಾತನಾಡಬೇಕು ಎಂದು ಹೈಕಮಾಂಡ್ ಸೂಚಿಸಿದೆ. ಯಾವುದೇ ಕಾರಣಕ್ಕೂ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಹಿರಿಯ ಸದಸ್ಯನಾದರೂ ಈ ಬಗ್ಗೆ ಏನೂ ಹೇಳುವುದಿಲ್ಲ’ ಎಂದರು.</p> .ಕರ್ನಾಟಕ ವಿ.ವಿ ಉತ್ತುಂಗ ಕಾಪಾಡಿಕೊಳ್ಳಲಿ: ಕಾನೂನು ಸಚಿವ ಎಚ್.ಕೆ. ಪಾಟೀಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸಿ ಒಂದು ವರ್ಷ ಪೂರ್ಣಗೊಳ್ಳುವುದರ ಒಳಗೆ ರಾಜ್ಯದಾದ್ಯಂತ ಗಾಂಧೀಜಿ ಭೇಟಿ ನೀಡಿದ ಸ್ಥಳ ಅಥವಾ ಆ ಜಿಲ್ಲೆಯಲ್ಲಿ ಅವರ ಪುತ್ಥಳಿ ಸಮೇತ ಸ್ತಂಭ ನಿರ್ಮಾಣ ಮಾಡಲಾಗುವುದು’ ಎಂದು ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆದ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.ಧಾರವಾಡ ಕವಿಸಂ ಸರ್ಕಾರಕ್ಕೆ ವರ್ಷಕ್ಕೆರಡು ವರದಿಗಳನ್ನು ನೀಡಬೇಕು: ಎಚ್.ಕೆ. ಪಾಟೀಲ.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ ‘ಶತಮಾನೋತ್ಸವ ಕಾರ್ಯಕ್ರಮದ ವೇಳೆ ಅಂದುಕೊಂಡಂತೆ ಗಾಂಧಿ ಭಾರತ ಯಾತ್ರೆಯ ಕಾರ್ಯಕ್ರಮಗಳನ್ನು ಅ. 2ರ ಒಳಗೆ ಪೂರ್ಣಗೊಳಿಸಬೇಕಿತ್ತು. ಸಾಧ್ಯವಾಗದ ಕಾರಣ ದಿನಾಂಕ ವಿಸ್ತರಣೆ ಮಾಡಿದ್ದೇವೆ’ ಎಂದರು. </p><p><strong>ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣ:</strong> ಅಂಜನಾದ್ರಿ ಬೆಟ್ಟದ ಅಭಿವೃದ್ದಿಗಾಗಿ ಈಗಾಗಲೇ ಕಾಮಗಾರಿಗಳು ನಡೆಯುತ್ತಿದ್ದು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಎಚ್.ಕೆ.ಪಾಟೀಲ್ ಹೇಳಿದರು.</p>.ಬೆಂಗಳೂರು| ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಪರಿಶೀಲನೆ: ಸಚಿವ ಎಚ್.ಕೆ. ಪಾಟೀಲ . <p>‘ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಮೋರೇರ್ ತಟ್ಟೆಯ ಪ್ರದೇಶವನ್ನು ಯೂನಸ್ಕೊ ಪಟ್ಟಿಗೆ ಸೇರಿಸುವ ಬಗ್ಗೆ ಪ್ರಯತ್ನ ನಡೆದಿದ್ದು, ಇದಕ್ಕೆ ಪೂರಕವಾಗಿ ಬೆಂಗಳೂರಿನ ಬಾಂಕ್ವೆಟ್ ಹಾಲ್ನಲ್ಲಿ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ’ ಎಂದರು.</p><p>ಉತ್ತರಾಧಿಕಾರಿ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಪಕ್ಷದ ವೇದಿಕೆಯಲ್ಲಿ ಮಾತ್ರ ಈ ವಿಚಾರ ಮಾತನಾಡಬೇಕು ಎಂದು ಹೈಕಮಾಂಡ್ ಸೂಚಿಸಿದೆ. ಯಾವುದೇ ಕಾರಣಕ್ಕೂ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಹಿರಿಯ ಸದಸ್ಯನಾದರೂ ಈ ಬಗ್ಗೆ ಏನೂ ಹೇಳುವುದಿಲ್ಲ’ ಎಂದರು.</p> .ಕರ್ನಾಟಕ ವಿ.ವಿ ಉತ್ತುಂಗ ಕಾಪಾಡಿಕೊಳ್ಳಲಿ: ಕಾನೂನು ಸಚಿವ ಎಚ್.ಕೆ. ಪಾಟೀಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>