ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಂಗಾವತಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮೋಹನ್ ಮಾತನಾಡಿ,‘ಕಳೆದ ವರ್ಷ ಇದೇ ತಾಲ್ಲೂಕಿನಲ್ಲಿ ಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಗಣೇಶೋತ್ಸವವನ್ನು ಜಲಶಕ್ತಿಯ ಪರಿಕಲ್ಪನೆಯೊಂದಿಗೆ ಆಚರಿಸಲಾಗಿತ್ತು. ಈ ವರ್ಷ ಜಲ ಜೀವನ ಮಿಷನ್ ಎಂಬ ಪರಿಕಲ್ಪನೆಯಲ್ಲಿ ಮನೆ ಮನೆಗೆ ಶುದ್ಧ ನೀರು ಎಂಬುದಾಗಿದೆ. ಆಚರಣೆಯು ಸಾರ್ಥಕವಾಗುವ ಉದ್ದೇಶದಿಂದ ಜನರಲ್ಲಿ ಜಾಗೃತಿ ಮೂಡಿಸಲು ಗಣೇಶೋತ್ಸವವನ್ನು ಉಪಯೋಗಿಸುತ್ತಿರುವುದು ಸಂತಸ ತಂದಿದೆ’ ಎಂದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನಮಂತಗೌಡ ಪಾಟೀಲ ಮಾತನಾಡಿ,‘ನೀರಿನ ಸಂರಕ್ಷಣೆ ಹಾಗೂ ಶುದ್ಧ ನೀರಿನ ಬಳಕೆ, ಪ್ರಸ್ತುತ ಸನ್ನಿವೇಶದಲ್ಲಿ ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಸಲದ ಉದ್ದೇಶ’ ಎಂದು ನುಡಿದರು.