<p><strong>ಕಾರಟಗಿ:</strong> ‘ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ. ನಿಯಮ ಮೀರಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಶಾಂತಿ–ಸೌಹಾರ್ದಕ್ಕೆ ಹೆಸರಾದ ಹಿಂದಿನ ಪರಂಪರೆಯನ್ನು ನಾಗರಿಕರು ಉಳಿಸಿಕೊಂಡು ಒಳ್ಳೆಯ ಹೆಸರು ತರಬೇಕು’ ಎಂದು ಇನ್ಸ್ಪೆಕ್ಟರ್ ಸುಧೀರಕುಮಾರ ಬೆಂಕಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ಗಣೇಶ ವಿಸರ್ಜನೆ ಸಮಯದಲ್ಲಿ ಸಂಘಟನೆಗಳು ಡಿಜೆ ಬಳಕೆ ಕೈಬಿಡಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್, ಸ್ಥಳೀಯ ಸಂಸ್ಥೆ ಸೇರಿ ಇತರ ಇಲಾಖೆಗಳ ಪರವಾನಗಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಶಾಂತಿ ಕಾಪಾಡಬೇಕು’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಮಾತನಾಡಿ,‘ಪಟ್ಟಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರ್ಕಾರದ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಬೇಕು. ಪರಿಸರ ಮಾಲಿನ್ಯ ಆಗದಂತೆ ನೋಡಿಕೊಳ್ಳಬೇಕು. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಕಾಪಾಡಬೇಕು’ ಎಂದು ಹೇಳಿದರು.</p>.<p>ಪುರಸಭೆ ಸದಸ್ಯರಾದ ದೊಡ್ಡಬಸವರಾಜ ಬೂದಿ, ಮಂಜುನಾಥ ಮೇಗೂರು, ರೈತ ಮುಖಂಡ ಮರಿಯಪ್ಪ ಸಾಲೋಣಿ, ರಾಘವೇಂದ್ರ, ಯಮನೂರ ಚೌಡ್ಕಿ, ಪಿಎಸ್ಐ ಕಾಮಣ್ಣ, ಜೆಸ್ಕಾಂ ಅಧಿಕಾರಿ ಶಿವರಾಜ, ಎಎಸ್ಐ ಬಿ.ಎಸ್.ಬೋರಣ್ಣವರ್, ಪೊಲೀಸ್ ಸಿಬ್ಬಂದಿ ಜಾಫರ್, ಶರಣಪ್ಪ ಸೇರಿ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ‘ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ. ನಿಯಮ ಮೀರಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಶಾಂತಿ–ಸೌಹಾರ್ದಕ್ಕೆ ಹೆಸರಾದ ಹಿಂದಿನ ಪರಂಪರೆಯನ್ನು ನಾಗರಿಕರು ಉಳಿಸಿಕೊಂಡು ಒಳ್ಳೆಯ ಹೆಸರು ತರಬೇಕು’ ಎಂದು ಇನ್ಸ್ಪೆಕ್ಟರ್ ಸುಧೀರಕುಮಾರ ಬೆಂಕಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ಗಣೇಶ ವಿಸರ್ಜನೆ ಸಮಯದಲ್ಲಿ ಸಂಘಟನೆಗಳು ಡಿಜೆ ಬಳಕೆ ಕೈಬಿಡಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್, ಸ್ಥಳೀಯ ಸಂಸ್ಥೆ ಸೇರಿ ಇತರ ಇಲಾಖೆಗಳ ಪರವಾನಗಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಶಾಂತಿ ಕಾಪಾಡಬೇಕು’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಮಾತನಾಡಿ,‘ಪಟ್ಟಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರ್ಕಾರದ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಬೇಕು. ಪರಿಸರ ಮಾಲಿನ್ಯ ಆಗದಂತೆ ನೋಡಿಕೊಳ್ಳಬೇಕು. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಶಾಂತಿ ಕಾಪಾಡಬೇಕು’ ಎಂದು ಹೇಳಿದರು.</p>.<p>ಪುರಸಭೆ ಸದಸ್ಯರಾದ ದೊಡ್ಡಬಸವರಾಜ ಬೂದಿ, ಮಂಜುನಾಥ ಮೇಗೂರು, ರೈತ ಮುಖಂಡ ಮರಿಯಪ್ಪ ಸಾಲೋಣಿ, ರಾಘವೇಂದ್ರ, ಯಮನೂರ ಚೌಡ್ಕಿ, ಪಿಎಸ್ಐ ಕಾಮಣ್ಣ, ಜೆಸ್ಕಾಂ ಅಧಿಕಾರಿ ಶಿವರಾಜ, ಎಎಸ್ಐ ಬಿ.ಎಸ್.ಬೋರಣ್ಣವರ್, ಪೊಲೀಸ್ ಸಿಬ್ಬಂದಿ ಜಾಫರ್, ಶರಣಪ್ಪ ಸೇರಿ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>