<p><strong>ಕುಕನೂರು:</strong> ‘ಗಣೇಶ ಹಬ್ಬದಲ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡಿಜೆ ಸೌಂಡ್ ಸಿಸ್ಟಮ್ಗೆ ಅನುಮತಿ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು’ ಎಂದು ಪಿಎಸ್ಐ ಗುರುರಾಜ್ ಟಿ. ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಸುತ್ತಮುತ್ತಲಿನಲ್ಲಿ ಸರಿಸುಮಾರು ನೂರಕ್ಕೂ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಅದೇ ರೀತಿ ಸೆ. 15-16 ರಂದು ಮುಸ್ಲಿಮರ ಈದ್ ಮಿಲಾದ್ ಹಬ್ಬವು ಇರುವುದರಿಂದ, ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ ಈ ಎರಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಹೇಳಿದರು.</p>.<p>ಈದ್ ಮಿಲಾದ್ ಇರುವ ಕಾರಣ 11ನೇ ದಿನ ಗಣೇಶನ ಮೂರ್ತಿ ವಿಸರ್ಜನೆಯನ್ನು 7ನೇ ದಿನ ಹಾಗೂ 9ನೇ ದಿನದಂದು ನೆರವೇರಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ‘ಗಣೇಶ ಹಬ್ಬದಲ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡಿಜೆ ಸೌಂಡ್ ಸಿಸ್ಟಮ್ಗೆ ಅನುಮತಿ ನೀಡಲಾಗುವುದಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು’ ಎಂದು ಪಿಎಸ್ಐ ಗುರುರಾಜ್ ಟಿ. ಹೇಳಿದರು.</p>.<p>ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಸುತ್ತಮುತ್ತಲಿನಲ್ಲಿ ಸರಿಸುಮಾರು ನೂರಕ್ಕೂ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಅದೇ ರೀತಿ ಸೆ. 15-16 ರಂದು ಮುಸ್ಲಿಮರ ಈದ್ ಮಿಲಾದ್ ಹಬ್ಬವು ಇರುವುದರಿಂದ, ಯಾವುದೇ ರೀತಿ ಕೋಮು ಗಲಭೆಯಾಗದಂತೆ, ಸೌಹಾರ್ದಯುತವಾಗಿ ಈ ಎರಡು ಹಬ್ಬವನ್ನು ಆಚರಣೆ ಮಾಡಬೇಕು ಎಂದು ಹೇಳಿದರು.</p>.<p>ಈದ್ ಮಿಲಾದ್ ಇರುವ ಕಾರಣ 11ನೇ ದಿನ ಗಣೇಶನ ಮೂರ್ತಿ ವಿಸರ್ಜನೆಯನ್ನು 7ನೇ ದಿನ ಹಾಗೂ 9ನೇ ದಿನದಂದು ನೆರವೇರಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಹಬ್ಬ ಆಚರಣೆ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>