<p><strong>ಗಂಗಾವತಿ:</strong> ಇಲ್ಲಿನ ಯಶೋಧಾ ಆಸ್ಪತ್ರೆ ಬಳಿ ಸೋಮವಾರ ರಾತ್ರಿ ಗುಂಡಮ್ಮ ಕ್ಯಾಂಪಿನ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿದ್ದು, ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಮೂವರಿಗೆ ಗಾಯಗಳಾಗಿವೆ.</p><p>ಚಾರು ಇರಿತಕ್ಕೆ ಒಳಗಾದ ಅಂಬೇಡ್ಕರ್ ನಗರದ ಶಿವು (38) ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಗಣೇಶ್, ಮಂಜು ಹಾಗೂ ಸಾಗರ್ ಹಲ್ಲೆಗೊಳಗಾದವರು. </p><p>ಗುಂಡಮ್ಮ ಕ್ಯಾಂಪಿನಲ್ಲಿ ಗಣೇಶ ಮಂಡಳಿಯಿಂದ 17ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿಯಾಗಿ ಆಯೋಜಿಸಿ, ಡಿಜೆ ಬಳಸಿ ಯುವಕರು ಕುಣಿಯುತ್ತಿದ್ದರು. ಇದೆ ವೇಳೆಯಲ್ಲಿ ಏಕಾಏಕಿ ಎರಡು ಗುಂಪುಗಳ ನಡುವೆ ವಾದ-ವಿವಾದಗಳಾಗಿ ಮೊದಲಿಗೆ ಸಣ್ಣ ಜಗಳವಾಗಿತ್ತು.</p><p>ನಂತರ ಈ ವಿವಾದ ಕೈ ಮಿಲಾಯಿಸುವ ಹಂತಕ್ಕೆ ಹೋಗಿ, ನಂತರ ಹಲ್ಲೆ ನಡೆಯಿತು. ಒಂದು ಗುಂಪಿನ ಕಡೆಯವರು ಇನ್ನೊಂದು ಗುಂಪಿನವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ.</p><p>ಗಾಯಗೊಂಡವರು ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಈ ಘಟನೆಗೆ ಹಳೆ ವೈಷ್ಯಮ್ಯ, ಜೂಜಾಟದ ವೇಳೆ ನಡೆಸಿದ್ದ ವ್ಯವಹಾರ ಕಾರಣ ಎಂದು ಮೂಲಗಳು ತಿಳಿಸಿವೆ.</p><p>ಘಟನೆ ಸಂಬಂಧ ಮುತ್ತಣ್ಣ, ಧರ್ಮಣ್ಣ, ಬಾಬು, ವೆಂಕಟೇಶ, ಜಂಭ ಸೇರಿದಂತೆ ಒಟ್ಟು 20 ಜನರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ರಾಜ್ಯದ ಕೆಲವು ಕಡೆ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗಳು ಮಾಸುವ ಮುನ್ನವೇ ಗಂಗಾವತಿಯಲ್ಲಿಯೂ ಚಾಕು ಇರಿತವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಇಲ್ಲಿನ ಯಶೋಧಾ ಆಸ್ಪತ್ರೆ ಬಳಿ ಸೋಮವಾರ ರಾತ್ರಿ ಗುಂಡಮ್ಮ ಕ್ಯಾಂಪಿನ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿದ್ದು, ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ. ಮೂವರಿಗೆ ಗಾಯಗಳಾಗಿವೆ.</p><p>ಚಾರು ಇರಿತಕ್ಕೆ ಒಳಗಾದ ಅಂಬೇಡ್ಕರ್ ನಗರದ ಶಿವು (38) ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಗಣೇಶ್, ಮಂಜು ಹಾಗೂ ಸಾಗರ್ ಹಲ್ಲೆಗೊಳಗಾದವರು. </p><p>ಗುಂಡಮ್ಮ ಕ್ಯಾಂಪಿನಲ್ಲಿ ಗಣೇಶ ಮಂಡಳಿಯಿಂದ 17ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಅದ್ದೂರಿಯಾಗಿ ಆಯೋಜಿಸಿ, ಡಿಜೆ ಬಳಸಿ ಯುವಕರು ಕುಣಿಯುತ್ತಿದ್ದರು. ಇದೆ ವೇಳೆಯಲ್ಲಿ ಏಕಾಏಕಿ ಎರಡು ಗುಂಪುಗಳ ನಡುವೆ ವಾದ-ವಿವಾದಗಳಾಗಿ ಮೊದಲಿಗೆ ಸಣ್ಣ ಜಗಳವಾಗಿತ್ತು.</p><p>ನಂತರ ಈ ವಿವಾದ ಕೈ ಮಿಲಾಯಿಸುವ ಹಂತಕ್ಕೆ ಹೋಗಿ, ನಂತರ ಹಲ್ಲೆ ನಡೆಯಿತು. ಒಂದು ಗುಂಪಿನ ಕಡೆಯವರು ಇನ್ನೊಂದು ಗುಂಪಿನವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ.</p><p>ಗಾಯಗೊಂಡವರು ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಈ ಘಟನೆಗೆ ಹಳೆ ವೈಷ್ಯಮ್ಯ, ಜೂಜಾಟದ ವೇಳೆ ನಡೆಸಿದ್ದ ವ್ಯವಹಾರ ಕಾರಣ ಎಂದು ಮೂಲಗಳು ತಿಳಿಸಿವೆ.</p><p>ಘಟನೆ ಸಂಬಂಧ ಮುತ್ತಣ್ಣ, ಧರ್ಮಣ್ಣ, ಬಾಬು, ವೆಂಕಟೇಶ, ಜಂಭ ಸೇರಿದಂತೆ ಒಟ್ಟು 20 ಜನರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ರಾಜ್ಯದ ಕೆಲವು ಕಡೆ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗಳು ಮಾಸುವ ಮುನ್ನವೇ ಗಂಗಾವತಿಯಲ್ಲಿಯೂ ಚಾಕು ಇರಿತವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>