<p><strong>ಗಂಗಾವತಿ:</strong> ತಾಲ್ಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕೊಪ್ಪಳದ ಚಕೋರ ಸಾಹಿತ್ಯ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿ ಚಿಂತನೆ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.</p>.<p>ಕರ್ನಾಟಕ ಸಾಹಿತ್ಯ ಅಕಾಡಮಿ ಸದಸ್ಯ ಅಜಮೀರ ನಂದಾಪುರ ಮಾತನಾಡಿ, ಕನ್ನಡ ಭಾಷೆಯ ಶ್ರೇಷ್ಠತೆ ಮೆರೆದ ಕವಿ ಕುವೆಂಪು, ಹಂಪ ನಾಗರಾಜಯ್ಯ, ಚಂದ್ರಶೇಖರ ಕಂಬಾರ, ಚೆನ್ನವೀರ ಕಣವಿ ಸೇರಿ ಇತರೆ ಲೇಖಕರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಸಿ.ಎಂ.ಎನ್ ಕಾಲೇಜಿನ ಉಪನ್ಯಾಸಕ ಹನುಮಂತಪ್ಪ ಚಂದಲಾಪುರ ಅವರು ಕನ್ನಡನಾಡು ನುಡಿಯ ಚಿಂತನೆ ಕುರಿತು ವಿಷಯ ಮಂಡಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಪ್ರೊ.ಕರಿಗೂಳಿ ಅವರು ಜಿ.ಪಿ ರಾಜರತ್ನಂ ಅವರ ರತ್ನನ್ ಪದಗಳನ್ನು ಉಲ್ಲೇಖಿಸಿ ಕನ್ನಡ ಭಾಷೆ ಮಹತ್ವದ ಕುರಿತು ತಿಳಿಸಿ, ರನ್ನನ ಗದಾಯುದ್ಧದ ಪ್ರಸಂಗದ ಮೂಲಕ ಹಳಗನ್ನಡದ ಭಾಷಾ ವೈಶಿಷ್ಟ್ಯ ಉಲ್ಲೇಖಿಸಿ ಕನ್ನಡ ಭಾಷೆ ಸೊಗಡನ್ನು ವಿವರಿದರು.</p>.<p>ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ರಫಿ, ಕಾಲೇಜಿನ ಸಹ ಪ್ರಾಧ್ಯಾಪಕ ಸರಫರಾಜ್ ಅಹಮದ್ ಮಾತನಾಡಿದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು.</p>.<p>ಅಧ್ಯಾಪಕ ವಿರುಪಾಕ್ಷ.ಕೆ, ಸಹಾಯಕ ಪ್ರಾಧ್ಯಾಪಕ ಶಶಿಕುಮಾರ, ಶಂಕ್ರಪ್ಪ ಎಂ., ರವಿಕುಮಾರ, ಉಪನ್ಯಾಸಕ ಈಶಪ್ಪ ಮೇಟಿ, ರಾಧ, ಜಬೀನಾ ಬೇಗಂ, ವಿನಾಯಕ, ಶಾಂತಿ, ಚಿನ್ನವರಪ್ರಸಾದ, ಶರಣಬಸವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕೊಪ್ಪಳದ ಚಕೋರ ಸಾಹಿತ್ಯ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿ ಚಿಂತನೆ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.</p>.<p>ಕರ್ನಾಟಕ ಸಾಹಿತ್ಯ ಅಕಾಡಮಿ ಸದಸ್ಯ ಅಜಮೀರ ನಂದಾಪುರ ಮಾತನಾಡಿ, ಕನ್ನಡ ಭಾಷೆಯ ಶ್ರೇಷ್ಠತೆ ಮೆರೆದ ಕವಿ ಕುವೆಂಪು, ಹಂಪ ನಾಗರಾಜಯ್ಯ, ಚಂದ್ರಶೇಖರ ಕಂಬಾರ, ಚೆನ್ನವೀರ ಕಣವಿ ಸೇರಿ ಇತರೆ ಲೇಖಕರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಸಿ.ಎಂ.ಎನ್ ಕಾಲೇಜಿನ ಉಪನ್ಯಾಸಕ ಹನುಮಂತಪ್ಪ ಚಂದಲಾಪುರ ಅವರು ಕನ್ನಡನಾಡು ನುಡಿಯ ಚಿಂತನೆ ಕುರಿತು ವಿಷಯ ಮಂಡಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಪ್ರೊ.ಕರಿಗೂಳಿ ಅವರು ಜಿ.ಪಿ ರಾಜರತ್ನಂ ಅವರ ರತ್ನನ್ ಪದಗಳನ್ನು ಉಲ್ಲೇಖಿಸಿ ಕನ್ನಡ ಭಾಷೆ ಮಹತ್ವದ ಕುರಿತು ತಿಳಿಸಿ, ರನ್ನನ ಗದಾಯುದ್ಧದ ಪ್ರಸಂಗದ ಮೂಲಕ ಹಳಗನ್ನಡದ ಭಾಷಾ ವೈಶಿಷ್ಟ್ಯ ಉಲ್ಲೇಖಿಸಿ ಕನ್ನಡ ಭಾಷೆ ಸೊಗಡನ್ನು ವಿವರಿದರು.</p>.<p>ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ರಫಿ, ಕಾಲೇಜಿನ ಸಹ ಪ್ರಾಧ್ಯಾಪಕ ಸರಫರಾಜ್ ಅಹಮದ್ ಮಾತನಾಡಿದರು.</p>.<p>ಸಂವಿಧಾನ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು.</p>.<p>ಅಧ್ಯಾಪಕ ವಿರುಪಾಕ್ಷ.ಕೆ, ಸಹಾಯಕ ಪ್ರಾಧ್ಯಾಪಕ ಶಶಿಕುಮಾರ, ಶಂಕ್ರಪ್ಪ ಎಂ., ರವಿಕುಮಾರ, ಉಪನ್ಯಾಸಕ ಈಶಪ್ಪ ಮೇಟಿ, ರಾಧ, ಜಬೀನಾ ಬೇಗಂ, ವಿನಾಯಕ, ಶಾಂತಿ, ಚಿನ್ನವರಪ್ರಸಾದ, ಶರಣಬಸವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>