ಈ ವೇಳೆ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಮಾತನಾಡಿ, ನೆರೆ ಪೀಡಿತ ಕುಟುಂಬಗಳಿಗೆ ಪರಿಹಾರ ನೀಡುವುದಕ್ಕಾಗಿ ತಾಲ್ಲೂಕಿನ ಆನೆಗೊಂದಿ, ವೆಂಕಟಗಿರಿ, ಮರಳಿ, ಶ್ರೀರಾಮ ನಗರ ಸೇರಿದಂತೆ ಸಾಕಷ್ಟು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ದವಸ ಧಾನ್ಯಗಳನ್ನು, ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಆದರೆ, ಸಂಗ್ರಹಿಸಿದ ವಸ್ತುಗಳನ್ನು ತಾಲ್ಲೂಕು ಆಡಳಿತ ಮಂಡಳಿಯು ಪ್ರವಾಹ ಪೀಡಿತರಿಗೆ ಕಳುಹಿಸಿ ಕೊಡದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ, ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.