ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಹಾಲಪ್ಪ ಆಚಾರ್ ಹಾಗೂ ರಾಯಚೂರು ಕೃಷಿ ವಿವಿಯ ಆಡಳಿತ ಮಂಡಳಿ ಸದಸ್ಯರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಈಚೆಗೆ ಭೇಟಿ ಮಾಡಿ ಕಾಲೇಜು ಮಂಜೂರಿಗೆ ಮನವಿ ಮಾಡಿತ್ತು. ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ಕೃಷಿಕಾಲೇಜು ಆರಂಭಕ್ಕೆ ಅವಶ್ಯವಿರುವ ಸಿಬ್ಬಂದಿ ವಿವರ ಮತ್ತು ಹಣಕಾಸಿನ ಕನಿಷ್ಠ ಅವಶ್ಯಕತೆಯ ವಿವರದೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಸ್ಥಾಪಿಸಲು ಪ್ರಸ್ತಾವ
ಸಲ್ಲಿಸಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಮಂಜೂರು ಮಾಡುವ ಭರವಸೆ ನೀಡಿದ್ದರು.