<p><strong>ಗಂಗಾವತಿ</strong>: ಕಳೆದ ಒಂದು ವರ್ಷದಲ್ಲಿ 10 ದ್ವಿಚಕ್ರ ವಾಹನ ಕಳ್ಳತನ ( ₹4.50ಲಕ್ಷ ಮೌಲ್ಯ) ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.</p>.<p>ಗಂಗಾವತಿ ನಗರದ ಸಾಯಿನಗರದ ನಿವಾಸಿ ಪ್ರಕಾಶ ಈರಣ್ಣ ತಳವಾರ (41) ಬೈಕ್ ಕಳ್ಳತನ ಮಾಡಿದ ಆರೋಪಿ.</p>.<p>ಏ 28 ರಂದು ಗಂಗಾವತಿ ತಾಲ್ಲೂಕಿನ ಬಸಾ ಪಟ್ಟಣ ಗ್ರಾಮದ ಮಲ್ಲಪ್ಪ ಬಸಪ್ಪ ಎಂಬ ವ್ಯಕ್ತಿ ತಮ್ಮ ಮನೆ ಕಳ್ಳತನ ಆಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಪೋಲಿಸರ ತಂಡ ಬೈಕ್ ಕಳ್ಳತನದ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಆಗ ಆರೋಪಿ 10 ಬೈಕ್ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿದ್ದಾನೆ.</p>.<p>ಎಸ್ಪಿ, ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಐ ಪ್ರಕಾಶ ಮಾಳೆ ನೇತೃತ್ವದಲ್ಲಿ ಆರೋಪಿ ಪತ್ತೆ ಕಾರ್ಯಾಚರಣೆ ನಡೆದಿದೆ.</p>.<p>ಸಿ.ಎಚ್.ಸಿ ಮರಿಶಾಂತಗೌಡ, ಫಕಿರಪ್ಪ, ಎಚ್.ಸಿ ಭೀಮಪ್ಪ, ಸಿಪಿಸಿ ಮೈಲಾರಪ್ಪ, ಸಿಪಿಸಿ ಗುಂಡಪ್ಪ, ಎಚ್.ಸಿ ರಾಘವೇಂದ್ರ, ಎಚ್.ಸಿ ಸುಭಾಷ, ಸಿಪಿಸಿ ವಿಶ್ವನಾಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-35-203575492</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಕಳೆದ ಒಂದು ವರ್ಷದಲ್ಲಿ 10 ದ್ವಿಚಕ್ರ ವಾಹನ ಕಳ್ಳತನ ( ₹4.50ಲಕ್ಷ ಮೌಲ್ಯ) ಮಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.</p>.<p>ಗಂಗಾವತಿ ನಗರದ ಸಾಯಿನಗರದ ನಿವಾಸಿ ಪ್ರಕಾಶ ಈರಣ್ಣ ತಳವಾರ (41) ಬೈಕ್ ಕಳ್ಳತನ ಮಾಡಿದ ಆರೋಪಿ.</p>.<p>ಏ 28 ರಂದು ಗಂಗಾವತಿ ತಾಲ್ಲೂಕಿನ ಬಸಾ ಪಟ್ಟಣ ಗ್ರಾಮದ ಮಲ್ಲಪ್ಪ ಬಸಪ್ಪ ಎಂಬ ವ್ಯಕ್ತಿ ತಮ್ಮ ಮನೆ ಕಳ್ಳತನ ಆಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಪೋಲಿಸರ ತಂಡ ಬೈಕ್ ಕಳ್ಳತನದ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಆಗ ಆರೋಪಿ 10 ಬೈಕ್ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿದ್ದಾನೆ.</p>.<p>ಎಸ್ಪಿ, ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಐ ಪ್ರಕಾಶ ಮಾಳೆ ನೇತೃತ್ವದಲ್ಲಿ ಆರೋಪಿ ಪತ್ತೆ ಕಾರ್ಯಾಚರಣೆ ನಡೆದಿದೆ.</p>.<p>ಸಿ.ಎಚ್.ಸಿ ಮರಿಶಾಂತಗೌಡ, ಫಕಿರಪ್ಪ, ಎಚ್.ಸಿ ಭೀಮಪ್ಪ, ಸಿಪಿಸಿ ಮೈಲಾರಪ್ಪ, ಸಿಪಿಸಿ ಗುಂಡಪ್ಪ, ಎಚ್.ಸಿ ರಾಘವೇಂದ್ರ, ಎಚ್.ಸಿ ಸುಭಾಷ, ಸಿಪಿಸಿ ವಿಶ್ವನಾಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-35-203575492</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>