<p><strong>ಗಂಗಾವತಿ:</strong> ಕೊರೊನಾ ಸಂಕಷ್ಟದ ನಡುವೆಯೂ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿ ಸಂಭ್ರಮ ಮನೆ ಮಾಡಿದೆ.</p>.<p>ನಗರದ ಮಾರುಕಟ್ಟೆಯಲ್ಲಿ ಶನಿವಾರ ಪೂಜಾ ಸಾಮಗ್ರಿ, ಜವಳಿ, ಆಭರಣ, ಆಕಾಶಬುಟ್ಟಿ, ಹಣತೆ ಹಾಗೂ ಹೂವು–ಹಣ್ಣು ಖರೀದಿ ಭರ್ಜರಿಯಾಗಿ ನಡೆಯಿತು.</p>.<p>ದೀಪಾವಳಿ ಖರೀದಿಗೆ ಹಳ್ಳಿಗಳಿಂದ ಹೆಚ್ಚಿನ ಜನ ಬಂದಿದ್ದ ಕಾರಣ ವಾಹನ ದಟ್ಟಣೆ ಹೆಚ್ಚಾಗಿತ್ತು.</p>.<p>ಗಾಂಧಿಚೌಕ್, ಮಹಾವೀರ ಸರ್ಕಲ್, ಗಣೇಶ ಸರ್ಕಲ್, ಇಸ್ಲಾಂಪುರ ಹಾಗೂ ಗುಂಡಮ್ಮ ಕ್ಯಾಂಪ್ ಮಾರುಕಟ್ಟೆಯ ರಸ್ತೆಯ ಇಕ್ಕೆಲಗಳಲ್ಲಿ ಬಗೆ–ಬಗೆಯ ವಿದ್ಯುತ್ ದೀಪಗಳ ಸರ, ವೈವಿಧ್ಯಮಯ ಆಕಾಶಬುಟ್ಟಿ, ಹಣತೆ, ಚೆಂಡು ಹೂ–ಹಣ್ಣು ಮಾರಾಟ, ಖರೀದಿ ಜೋರಾಗಿತ್ತು.</p>.<p>ಹಬ್ಬದ ಹಿನ್ನೆಲೆಯಲ್ಲಿ ಹೂ, ಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ಆಲಂಕಾರಿಕ ವಸ್ತುಗಳ ಬೆಲೆ ದುಪ್ಪಟ್ಟಾಗಿತ್ತು.</p>.<p>ಲಕ್ಷ್ಮೀ ಪೂಜೆಗೆ ನಗರದ ಬಹುತೇಕ ಅಂಗಡಿ, ಮಳಿಗೆಗಳನ್ನು ಸಜ್ಜುಗೊಳಿಸಲಾಗಿದೆ. ವ್ಯಾಪಾರಸ್ಥರು ಶಾಮಿಯಾನ, ಚಪ್ಪರ ಹಾಕಿ ಅವುಗಳನ್ನು ವಿದ್ಯುತ್ ದೀಪ ತಳಿರು–ತೋರಣಗಳಿಂದ ಶೃಂಗರಿಸುತ್ತಿದ್ದ ದೃಶ್ಯ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಕೊರೊನಾ ಸಂಕಷ್ಟದ ನಡುವೆಯೂ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿ ಸಂಭ್ರಮ ಮನೆ ಮಾಡಿದೆ.</p>.<p>ನಗರದ ಮಾರುಕಟ್ಟೆಯಲ್ಲಿ ಶನಿವಾರ ಪೂಜಾ ಸಾಮಗ್ರಿ, ಜವಳಿ, ಆಭರಣ, ಆಕಾಶಬುಟ್ಟಿ, ಹಣತೆ ಹಾಗೂ ಹೂವು–ಹಣ್ಣು ಖರೀದಿ ಭರ್ಜರಿಯಾಗಿ ನಡೆಯಿತು.</p>.<p>ದೀಪಾವಳಿ ಖರೀದಿಗೆ ಹಳ್ಳಿಗಳಿಂದ ಹೆಚ್ಚಿನ ಜನ ಬಂದಿದ್ದ ಕಾರಣ ವಾಹನ ದಟ್ಟಣೆ ಹೆಚ್ಚಾಗಿತ್ತು.</p>.<p>ಗಾಂಧಿಚೌಕ್, ಮಹಾವೀರ ಸರ್ಕಲ್, ಗಣೇಶ ಸರ್ಕಲ್, ಇಸ್ಲಾಂಪುರ ಹಾಗೂ ಗುಂಡಮ್ಮ ಕ್ಯಾಂಪ್ ಮಾರುಕಟ್ಟೆಯ ರಸ್ತೆಯ ಇಕ್ಕೆಲಗಳಲ್ಲಿ ಬಗೆ–ಬಗೆಯ ವಿದ್ಯುತ್ ದೀಪಗಳ ಸರ, ವೈವಿಧ್ಯಮಯ ಆಕಾಶಬುಟ್ಟಿ, ಹಣತೆ, ಚೆಂಡು ಹೂ–ಹಣ್ಣು ಮಾರಾಟ, ಖರೀದಿ ಜೋರಾಗಿತ್ತು.</p>.<p>ಹಬ್ಬದ ಹಿನ್ನೆಲೆಯಲ್ಲಿ ಹೂ, ಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ಆಲಂಕಾರಿಕ ವಸ್ತುಗಳ ಬೆಲೆ ದುಪ್ಪಟ್ಟಾಗಿತ್ತು.</p>.<p>ಲಕ್ಷ್ಮೀ ಪೂಜೆಗೆ ನಗರದ ಬಹುತೇಕ ಅಂಗಡಿ, ಮಳಿಗೆಗಳನ್ನು ಸಜ್ಜುಗೊಳಿಸಲಾಗಿದೆ. ವ್ಯಾಪಾರಸ್ಥರು ಶಾಮಿಯಾನ, ಚಪ್ಪರ ಹಾಕಿ ಅವುಗಳನ್ನು ವಿದ್ಯುತ್ ದೀಪ ತಳಿರು–ತೋರಣಗಳಿಂದ ಶೃಂಗರಿಸುತ್ತಿದ್ದ ದೃಶ್ಯ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>