<p>ಪ್ರಜಾವಾಣಿ ವಾರ್ತೆ</p>.<p>ಗಂಗಾವತಿ: ಸಮೀಪದ ಕೊಟ್ಟೂರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ಭಕ್ತ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.</p>.<p>ಜಾತ್ರಾ ಮಹೋತ್ಸವದ ನಿಮಿತ್ತ ಕೊಟ್ಟೂರೇಶ್ವರ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿದವು.</p>.<p>ನಂತರ ಪಲ್ಲಕ್ಕಿಯಲ್ಲಿ ಕೊಟ್ಟೂರೇಶ್ವರ ದೇವರ ಮೂರ್ತಿ ಮೆರವಣಿಗೆ ನಡೆಯಿತು. ಸಂಜೆ ದೇವಸ್ಥಾನ ಆವರಣದಿಂದ ಸಂಭ್ರಮದ ರಥೋತ್ಸವ ಜರುಗಿತು. ದೇವರನ್ನು ಕೈ ಮುಗಿದು ಭಕ್ತರು ಭಕ್ತಿ ಮೆರೆದರು.</p>.<p>ಸ್ಥಳೀಯ ಮುಖಂಡರು ಸೇರಿದಂತೆ ಗ್ರಾಮೀಣ ಭಾಗದ ಭಕ್ತರು ಇದ್ದರು.</p>
<p>ಪ್ರಜಾವಾಣಿ ವಾರ್ತೆ</p>.<p>ಗಂಗಾವತಿ: ಸಮೀಪದ ಕೊಟ್ಟೂರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ಭಕ್ತ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.</p>.<p>ಜಾತ್ರಾ ಮಹೋತ್ಸವದ ನಿಮಿತ್ತ ಕೊಟ್ಟೂರೇಶ್ವರ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿದವು.</p>.<p>ನಂತರ ಪಲ್ಲಕ್ಕಿಯಲ್ಲಿ ಕೊಟ್ಟೂರೇಶ್ವರ ದೇವರ ಮೂರ್ತಿ ಮೆರವಣಿಗೆ ನಡೆಯಿತು. ಸಂಜೆ ದೇವಸ್ಥಾನ ಆವರಣದಿಂದ ಸಂಭ್ರಮದ ರಥೋತ್ಸವ ಜರುಗಿತು. ದೇವರನ್ನು ಕೈ ಮುಗಿದು ಭಕ್ತರು ಭಕ್ತಿ ಮೆರೆದರು.</p>.<p>ಸ್ಥಳೀಯ ಮುಖಂಡರು ಸೇರಿದಂತೆ ಗ್ರಾಮೀಣ ಭಾಗದ ಭಕ್ತರು ಇದ್ದರು.</p>