<p>ಗಂಗಾವತಿ: ವಿದ್ಯಾರ್ಥಿಗಳಲ್ಲಿ ನಾಡಿನ ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯ, ಜನಪದ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯ. ಅವುಗಳನ್ನು ಮುಂದಿನ ಪೀಳಿಗೆಗಳಿಗೆ ಉಳಿಸಿ, ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಜಿಲ್ಲಾ ಸಂಚಾಲಕ ರಮೇಶ ಗಬ್ಬೂರ್ ಹೇಳಿದರು.</p>.<p>ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಸಹಯೋಗದಲ್ಲಿ ಶನಿವಾರ ನಡೆದ ಜನರ ಜಾನಪದ ಗೀತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಅನೇಕ ವರ್ಷಗಳಿಂದ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯವನ್ನು ಹೋರಾಟ, ಚಳುವಳಿಯ ಮೂಲಕ ರಕ್ಷಣೆ ಮಾಡುತ್ತಾ ಬರುತ್ತಿದೆ. ಹಾಗೇ ಸರ್ಕಾರದ ಸಹಾಯ ಧನದಲ್ಲಿ ಕಾರ್ಯಕ್ರಮಗಳು ಆಯೋಜಿಸುತ್ತಾ ಅರಿವು ಮೂಡಿಸುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಬಸಪ್ಪ ನಾಗೋಲಿ, ಉಪನ್ಯಾಸಕ ಚಂದ್ರಶೇಖರ, ಲಿಂಗಣ್ಣ ಜಂಗಮರಹಳ್ಳಿ, ಅಜಗರ್ ಪಾಶ, ರಮಾ ಇದ್ದರು. ಉಪನ್ಯಾಸಕಿ ಸಾವಿತ್ರಿ ನಿರೂಪಿಸಿದರು. ಉಪನ್ಯಾಸಕಿ ಲಕ್ಷ್ಮಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1228845427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ವಿದ್ಯಾರ್ಥಿಗಳಲ್ಲಿ ನಾಡಿನ ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯ, ಜನಪದ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯ. ಅವುಗಳನ್ನು ಮುಂದಿನ ಪೀಳಿಗೆಗಳಿಗೆ ಉಳಿಸಿ, ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಜಿಲ್ಲಾ ಸಂಚಾಲಕ ರಮೇಶ ಗಬ್ಬೂರ್ ಹೇಳಿದರು.</p>.<p>ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಸಹಯೋಗದಲ್ಲಿ ಶನಿವಾರ ನಡೆದ ಜನರ ಜಾನಪದ ಗೀತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಅನೇಕ ವರ್ಷಗಳಿಂದ ನಾಡು, ನುಡಿ, ಸಂಸ್ಕೃತಿ, ಸಂಪ್ರದಾಯವನ್ನು ಹೋರಾಟ, ಚಳುವಳಿಯ ಮೂಲಕ ರಕ್ಷಣೆ ಮಾಡುತ್ತಾ ಬರುತ್ತಿದೆ. ಹಾಗೇ ಸರ್ಕಾರದ ಸಹಾಯ ಧನದಲ್ಲಿ ಕಾರ್ಯಕ್ರಮಗಳು ಆಯೋಜಿಸುತ್ತಾ ಅರಿವು ಮೂಡಿಸುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಬಸಪ್ಪ ನಾಗೋಲಿ, ಉಪನ್ಯಾಸಕ ಚಂದ್ರಶೇಖರ, ಲಿಂಗಣ್ಣ ಜಂಗಮರಹಳ್ಳಿ, ಅಜಗರ್ ಪಾಶ, ರಮಾ ಇದ್ದರು. ಉಪನ್ಯಾಸಕಿ ಸಾವಿತ್ರಿ ನಿರೂಪಿಸಿದರು. ಉಪನ್ಯಾಸಕಿ ಲಕ್ಷ್ಮಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1228845427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>