<p>ಗಂಗಾವತಿ: ನಗರದಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ನಗರದ ಹಲವು ವಾರ್ಡ್ಗಳಲ್ಲಿ ರಸ್ತೆಗಳು ಜಲಾವೃತಗೊಂಡರೆ, ಚರಂಡಿಗಳು ಕಟ್ಟಿಕೊಂಡು ರಸ್ತೆ ಮೇಲೆ ಕೊಳಚೆ ಹರಿದಿದೆ.</p>.<p>ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಕೆಲವು ಪ್ರದೇಶಗಳಲ್ಲಿ ಮನೆಗಳ ಮುಂದೆ ನೀರು ಸಂಗ್ರಹಗೊಂಡ ನಿವಾಸಿಗಳು ಪರದಾಡುವಂತಾಯತು.</p>.<p>ಮಳೆಯಿಂದ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆ ಮಕ್ಕಳ ಉದ್ಯಾನವನಕ್ಕೆ ಚರಂಡಿ ನೀರು ನುಗ್ಗಿ ಪಾರ್ಕ್ ಸಂಪೂರ್ಣ ಜಲಾವೃತಗೊಂಡಿದೆ. ಉದ್ಯಾನವನದ ಒಳಭಾಗದಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರ ಪ್ರವೇಶಕ್ಕೂ ಅಡಚಣೆ ಉಂಟಾಗಿದೆ.</p>.<p>ಪರಿಸ್ಥಿತಿಯನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳ ಮೂಲಕ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆಸಿದರು. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಚರಂಡಿಗಳ ನಿರಂತರ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-560775645</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ನಗರದಲ್ಲಿ ಗುರುವಾರ ರಾತ್ರಿ ಗಾಳಿ ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ನಗರದ ಹಲವು ವಾರ್ಡ್ಗಳಲ್ಲಿ ರಸ್ತೆಗಳು ಜಲಾವೃತಗೊಂಡರೆ, ಚರಂಡಿಗಳು ಕಟ್ಟಿಕೊಂಡು ರಸ್ತೆ ಮೇಲೆ ಕೊಳಚೆ ಹರಿದಿದೆ.</p>.<p>ಇದರಿಂದ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು. ಕೆಲವು ಪ್ರದೇಶಗಳಲ್ಲಿ ಮನೆಗಳ ಮುಂದೆ ನೀರು ಸಂಗ್ರಹಗೊಂಡ ನಿವಾಸಿಗಳು ಪರದಾಡುವಂತಾಯತು.</p>.<p>ಮಳೆಯಿಂದ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆ ಮಕ್ಕಳ ಉದ್ಯಾನವನಕ್ಕೆ ಚರಂಡಿ ನೀರು ನುಗ್ಗಿ ಪಾರ್ಕ್ ಸಂಪೂರ್ಣ ಜಲಾವೃತಗೊಂಡಿದೆ. ಉದ್ಯಾನವನದ ಒಳಭಾಗದಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರ ಪ್ರವೇಶಕ್ಕೂ ಅಡಚಣೆ ಉಂಟಾಗಿದೆ.</p>.<p>ಪರಿಸ್ಥಿತಿಯನ್ನು ಗಮನಿಸಿದ ನಗರಸಭೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳ ಮೂಲಕ ಚರಂಡಿಗಳ ಸ್ವಚ್ಛತಾ ಕಾರ್ಯ ನಡೆಸಿದರು. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಚರಂಡಿಗಳ ನಿರಂತರ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-560775645</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>