<p>ಕಂಪ್ಲಿ: ಗಂಗಾವತಿ- ಕಂಪ್ಲಿ-ದರೋಜಿ ರೈಲ್ವೆ ಮಾರ್ಗಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಇಲ್ಲಿನ ಬಿಜೆಪಿ ಮೀನುಗಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಒತ್ತಾಯಿಸಿದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಈ ಕುರಿತು ಭಾನುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ರೈಲ್ವೆ ಮಾರ್ಗದ 31.30 ಕಿ.ಮೀ ಸಮೀಕ್ಷೆ ಈಗಾಗಲೇ ಮುಕ್ತಾಯಗೊಂಡಿರುವುದರಿಂದ ಮುಂದಿನ ಕಾಮಗಾರಿ ಕೈಗೊಳ್ಳಲು ಅನುದಾನದ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿರುವುದಾಗಿ ಹೇಳಿದರು.</p>.<p>ಸದ್ಯ ಗಂಗಾವತಿಯಿಂದ ಬಳ್ಳಾರಿ 60 ಕಿ.ಮೀ ಅಂತರದಲ್ಲಿದೆ. ಆದರೆ, ರೈಲ್ವೆ ಮೂಲಕ ಬಳ್ಳಾರಿಗೆ ಸಂಚರಿಸಬೇಕಾದರೆ 119 ಕಿ.ಮೀ ಕ್ರಮಿಸಬೇಕಾಗುತ್ತದೆ. ಅದರಿಂದ ಪ್ರಯಾಣಿಕರಿಗೆ ಸಮಯ, ಇಂಧನ, ಸರಕು ಸಾಗಣೆ ದರವೂ ಹೆಚ್ಚಳವಾಗುತ್ತದೆ.</p>.<p>ಗಂಗಾವತಿ-ಕಂಪ್ಲಿ-ದರೋಜಿ ರೈಲು ಮಾರ್ಗ ನಿರ್ಮಿಸಿದಲ್ಲಿ ಬಳ್ಳಾರಿ, ಬೆಂಗಳೂರು, ಗುಂತಕಲ್, ಗುಂಟೂರು ನಗರಗಳಿಗೆ ನೇರ ಸಂಪರ್ಕ ಕಲ್ಪಿಸಿದಂತಾಗುತ್ತದೆ. ಜೊತೆಗೆ ಶ್ರೀಶೈಲ, ತಿರುಪತಿ ಧಾರ್ಮಿಕ ಕ್ಷೇತ್ರಗಳಿಗೆ ಗುಂತಕಲ್ ಮೂಲಕ ತಲುಪಲು ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವಿ ನೀಡಿರುವುದಾಗಿ ವಿವರಿಸಿದರು.</p>.<p>ಕಲ್ಯಾಣ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ರೈಲು ಮಾರ್ಗದ ನಿರ್ಮಾಣಕ್ಕೆ ತ್ವರಿತವಾಗಿ ಅನುದಾನ ಮಂಜೂರು ಮಾಡಲು ಗಮನಹರಿಸುವಂತೆ ಸಚಿವರನ್ನು ಒತ್ತಾಯಿಸಿರುವುದಾಗಿ ತಿಳಿಸಿದರು. ಬಿಜೆಪಿ ಮುಖಂಡರಾದ ವಿಜಯಶಂಕರರೆಡ್ಡಿ, ಸಿದ್ಧಾರ್ಥಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-25-615681728</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಗಂಗಾವತಿ- ಕಂಪ್ಲಿ-ದರೋಜಿ ರೈಲ್ವೆ ಮಾರ್ಗಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಇಲ್ಲಿನ ಬಿಜೆಪಿ ಮೀನುಗಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಒತ್ತಾಯಿಸಿದರು.</p>.<p>ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಈ ಕುರಿತು ಭಾನುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ರೈಲ್ವೆ ಮಾರ್ಗದ 31.30 ಕಿ.ಮೀ ಸಮೀಕ್ಷೆ ಈಗಾಗಲೇ ಮುಕ್ತಾಯಗೊಂಡಿರುವುದರಿಂದ ಮುಂದಿನ ಕಾಮಗಾರಿ ಕೈಗೊಳ್ಳಲು ಅನುದಾನದ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿರುವುದಾಗಿ ಹೇಳಿದರು.</p>.<p>ಸದ್ಯ ಗಂಗಾವತಿಯಿಂದ ಬಳ್ಳಾರಿ 60 ಕಿ.ಮೀ ಅಂತರದಲ್ಲಿದೆ. ಆದರೆ, ರೈಲ್ವೆ ಮೂಲಕ ಬಳ್ಳಾರಿಗೆ ಸಂಚರಿಸಬೇಕಾದರೆ 119 ಕಿ.ಮೀ ಕ್ರಮಿಸಬೇಕಾಗುತ್ತದೆ. ಅದರಿಂದ ಪ್ರಯಾಣಿಕರಿಗೆ ಸಮಯ, ಇಂಧನ, ಸರಕು ಸಾಗಣೆ ದರವೂ ಹೆಚ್ಚಳವಾಗುತ್ತದೆ.</p>.<p>ಗಂಗಾವತಿ-ಕಂಪ್ಲಿ-ದರೋಜಿ ರೈಲು ಮಾರ್ಗ ನಿರ್ಮಿಸಿದಲ್ಲಿ ಬಳ್ಳಾರಿ, ಬೆಂಗಳೂರು, ಗುಂತಕಲ್, ಗುಂಟೂರು ನಗರಗಳಿಗೆ ನೇರ ಸಂಪರ್ಕ ಕಲ್ಪಿಸಿದಂತಾಗುತ್ತದೆ. ಜೊತೆಗೆ ಶ್ರೀಶೈಲ, ತಿರುಪತಿ ಧಾರ್ಮಿಕ ಕ್ಷೇತ್ರಗಳಿಗೆ ಗುಂತಕಲ್ ಮೂಲಕ ತಲುಪಲು ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವಿ ನೀಡಿರುವುದಾಗಿ ವಿವರಿಸಿದರು.</p>.<p>ಕಲ್ಯಾಣ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ರೈಲು ಮಾರ್ಗದ ನಿರ್ಮಾಣಕ್ಕೆ ತ್ವರಿತವಾಗಿ ಅನುದಾನ ಮಂಜೂರು ಮಾಡಲು ಗಮನಹರಿಸುವಂತೆ ಸಚಿವರನ್ನು ಒತ್ತಾಯಿಸಿರುವುದಾಗಿ ತಿಳಿಸಿದರು. ಬಿಜೆಪಿ ಮುಖಂಡರಾದ ವಿಜಯಶಂಕರರೆಡ್ಡಿ, ಸಿದ್ಧಾರ್ಥಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-25-615681728</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>