<p><strong>ಗಂಗಾವತಿ (ಕೊಪ್ಪಳ): </strong>ಹೋಟೆಲ್ ಆರಂಭದ ಪರವಾನಗಿ ಸಂಬಂಧ ಗಂಗಾವತಿ ತಾಲ್ಲೂಕಿನ ಸಾಣಾಪುರ, ಹನುಮನಹಳ್ಳಿ, ಚಿಕ್ಕರಾಂಪುರ ಭಾಗದ ರೆಸಾರ್ಟ್ ಮಾಲೀಕರು ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಆನಂದ್ ಸಿಂಗ್ ನಡುವೆ ವಾಗ್ವಾದ ನಡೆಯಿತು.</p>.<p>‘ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ, ಹೋಟೆಲ್ ಪರವಾನಗಿ ಕೊಡಿಸುವ ಬಗ್ಗೆ ತೀರ್ಮಾನಿಸಲಾಗುವುದು. ಇದಕ್ಕ ಸ್ವಲ್ಪ ತಡವಾಗಬಹುದು’ ಎಂದರು.</p>.<p>ಆಗ ಕೆಲ ರೆಸಾರ್ಟ್ ಮಾಲೀಕರು ಹಂಪಿ, ಕಮಲಾಪುರ ವ್ಯಾಪ್ತಿಯಲ್ಲಿ ರೆಸಾರ್ಟ್, ಹೋಟೆಲ್ ಚಾಲ್ತಿಯಲ್ಲಿವೆ. ನಮ್ಮ ಭಾಗದಲ್ಲಿ ಮಾತ್ರ ಏಕೆ ಮುಚ್ಚಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>‘ಚಾಲ್ತಿಯಲ್ಲಿ ಇರುವ ರೆಸಾರ್ಟ್ ತೋರಿಸಿ. ಕೂಡಲೇ ಮುಚ್ಚಿಸುತ್ತೇನೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಲೀಕರು ‘ಕಮಲಾಪುರ ಭಾಗಕ್ಕೆ ಬನ್ನಿ ತೋರಿಸುತ್ತೇವೆ’ ಎಂದು ಪ್ರತ್ಯುತ್ತರ ನೀಡಿದರು.</p>.<p>ಆಗ ಸಚಿವರು ಕೋಪದಿಂದ, ‘ರೆಸಾರ್ಟ್ ಮಾಲೀಕರನ್ನು ಕರೆದುಕೊಂಡು ಹೋಗಿ ಹಂಪಿ, ಕಮಲಾಪುರ ವ್ಯಾಪ್ತಿಯ ರೆಸಾರ್ಟ್, ಹೊಟೇಲ್ ಮುಚ್ಚಿಸಿ’ ಎಂದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ): </strong>ಹೋಟೆಲ್ ಆರಂಭದ ಪರವಾನಗಿ ಸಂಬಂಧ ಗಂಗಾವತಿ ತಾಲ್ಲೂಕಿನ ಸಾಣಾಪುರ, ಹನುಮನಹಳ್ಳಿ, ಚಿಕ್ಕರಾಂಪುರ ಭಾಗದ ರೆಸಾರ್ಟ್ ಮಾಲೀಕರು ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಆನಂದ್ ಸಿಂಗ್ ನಡುವೆ ವಾಗ್ವಾದ ನಡೆಯಿತು.</p>.<p>‘ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ, ಹೋಟೆಲ್ ಪರವಾನಗಿ ಕೊಡಿಸುವ ಬಗ್ಗೆ ತೀರ್ಮಾನಿಸಲಾಗುವುದು. ಇದಕ್ಕ ಸ್ವಲ್ಪ ತಡವಾಗಬಹುದು’ ಎಂದರು.</p>.<p>ಆಗ ಕೆಲ ರೆಸಾರ್ಟ್ ಮಾಲೀಕರು ಹಂಪಿ, ಕಮಲಾಪುರ ವ್ಯಾಪ್ತಿಯಲ್ಲಿ ರೆಸಾರ್ಟ್, ಹೋಟೆಲ್ ಚಾಲ್ತಿಯಲ್ಲಿವೆ. ನಮ್ಮ ಭಾಗದಲ್ಲಿ ಮಾತ್ರ ಏಕೆ ಮುಚ್ಚಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>‘ಚಾಲ್ತಿಯಲ್ಲಿ ಇರುವ ರೆಸಾರ್ಟ್ ತೋರಿಸಿ. ಕೂಡಲೇ ಮುಚ್ಚಿಸುತ್ತೇನೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಲೀಕರು ‘ಕಮಲಾಪುರ ಭಾಗಕ್ಕೆ ಬನ್ನಿ ತೋರಿಸುತ್ತೇವೆ’ ಎಂದು ಪ್ರತ್ಯುತ್ತರ ನೀಡಿದರು.</p>.<p>ಆಗ ಸಚಿವರು ಕೋಪದಿಂದ, ‘ರೆಸಾರ್ಟ್ ಮಾಲೀಕರನ್ನು ಕರೆದುಕೊಂಡು ಹೋಗಿ ಹಂಪಿ, ಕಮಲಾಪುರ ವ್ಯಾಪ್ತಿಯ ರೆಸಾರ್ಟ್, ಹೊಟೇಲ್ ಮುಚ್ಚಿಸಿ’ ಎಂದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>