ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ತಹಶೀಲ್ದಾರ್ ಅಮಾನತು

Last Updated 24 ಮಾರ್ಚ್ 2021, 2:10 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ಸಾಗಾಣಿಕೆಗೆ ಬೆಂಬಲ ನೀಡುತ್ತಿರುವ ಆರೋಪದ ಮೇಲೆ ತಹಶೀಲ್ದಾರ್ ಎಂ.ರೇಣುಕಾ ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.

‘ತಾಲ್ಲೂಕಿನ ಆನೆಗೊಂದಿ, ಮಲ್ಲಾಪೂರ, ಸಂಗಾಪೂರ ಗ್ರಾಮಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ, ಅದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಮರಳು ಅಕ್ರಮ ಸಾಗಾಣಿಕೆ ಮಾಡಲು ಟ್ರ್ಯಾಕ್ಟರ್ ಮಾಲೀಕರಿಂದ ಪ್ರತಿ ತಿಂಗಳಿಗೆ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೊ ಡಿ.22ರಂದು ವೈರಲ್ ಆಗಿತ್ತು. ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಆದಾಯವನ್ನು ಕೈತಪ್ಪುವಂತೆ ಮಾಡಿ, ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಲಾಗಿದೆ’ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT