<p>ಪ್ರಜಾವಾಣಿ ವಾರ್ತೆ</p>.<p>ಕೊಪ್ಪಳ: ಜರ್ಮನಿಯ ಲಿಂಡೌನಲ್ಲಿ ಭಾನುವಾರ ಆರಂಭವಾಗಿರುವ ನೋಬೆಲ್ ಪ್ರಶಸ್ತಿ ಪಡೆದ ರಸಾಯನಶಾಸ್ತ್ರದ ದಿಗ್ಗಜ ವಿಜ್ಞಾನಿಗಳ ದುಂಡು ಮೇಜಿನ ಪರಿಷತ್ತಿನ ಸಭೆಗೆ ಯುವ ವಿಜ್ಞಾನಿ ಗಂಗಾವತಿಯ ನಸೀಮ್ ಕೌಸರ್ ಆಯ್ಕೆಯಾಗಿದ್ದಾರೆ. ಜುಲೈ 4ರ ತನಕ ಸಭೆ ನಡೆಯಲಿದೆ. </p>.<p>ನಸೀಮ್ ಕೌಸರ್ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ಸಹಾಯಕಿ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಗಂಗಾವತಿಯ ಉರ್ದು ಹೈಸ್ಕೂಲಿನ ಮುಖ್ಯೋಪಧ್ಯಾಯ ಎಂ.ಬಿ. ಕೊಪ್ಪಳ ಹಾಗೂ ಸೂಫಿಯಾ ಬೇಗಂ ದಂಪತಿಯ ಪುತ್ರಿ. </p>.<p>ಪ್ರತಿವರ್ಷ ಜರುಗುವ ಲಿಂಡೌ ಜಾಗತಿಕ ಸಭೆಯಲ್ಲಿ ವಿಶ್ವದ ಆಯ್ದ 600 ಯುವ ವಿಜ್ಞಾನಿಗಳನ್ನು ಆಹ್ವಾನಿಸಿ ನೊಬೆಲ್ ಪ್ರಶಸ್ತಿ ಪುರಸ್ಕೃತ ದಿಗ್ಗಜರೊಂದಿಗೆ ಚರ್ಚಾಕೂಟ, ದುಂಡು ಮೇಜಿನ ಪರಿಷತ್ತುಗಳನ್ನು ನಡೆಸಲಾಗುತ್ತದೆ. ಈ ಸಲದ 74ನೇ ಸಮ್ಮೇಳನ ರಸಾಯನಶಾಸ್ತ್ರ ವಿಷಯಕ್ಕೆ ಮೀಸಲಿಟ್ಟಿದ್ದು, ಭಾರತದಿಂದ 29 ಯುವ ವಿಜ್ಞಾನಿಗಳು ತೆರಳಿದ್ದಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳ ಪ್ರವಾಸ, ಇನ್ನಿತರ ಖರ್ಚುಗಳನ್ನು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್ಟಿ) ನಿಭಾಯಿಸಲಿದೆ.</p>.<p>‘ಜಾಗತಿಕ ಮಟ್ಟದ ದುಂಡು ಮೇಜಿನ ಪರಿಷತ್ತಿನ ಮಗಳು ಆಯ್ಕೆಯಾಗಿದ್ದು ಅತ್ಯಂತ ಖುಷಿಯಾಗಿದೆ. ಮಗಳ ಇನ್ನಷ್ಟು ಸಾಧನೆಗೂ ಇದು ಪ್ರೇರಣೆಯಾಗಲಿದೆ’ ಎಂದು ಎಂ.ಬಿ. ಕೊಪ್ಪಳ ಖುಷಿ ಹಂಚಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕೊಪ್ಪಳ: ಜರ್ಮನಿಯ ಲಿಂಡೌನಲ್ಲಿ ಭಾನುವಾರ ಆರಂಭವಾಗಿರುವ ನೋಬೆಲ್ ಪ್ರಶಸ್ತಿ ಪಡೆದ ರಸಾಯನಶಾಸ್ತ್ರದ ದಿಗ್ಗಜ ವಿಜ್ಞಾನಿಗಳ ದುಂಡು ಮೇಜಿನ ಪರಿಷತ್ತಿನ ಸಭೆಗೆ ಯುವ ವಿಜ್ಞಾನಿ ಗಂಗಾವತಿಯ ನಸೀಮ್ ಕೌಸರ್ ಆಯ್ಕೆಯಾಗಿದ್ದಾರೆ. ಜುಲೈ 4ರ ತನಕ ಸಭೆ ನಡೆಯಲಿದೆ. </p>.<p>ನಸೀಮ್ ಕೌಸರ್ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ಸಹಾಯಕಿ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಗಂಗಾವತಿಯ ಉರ್ದು ಹೈಸ್ಕೂಲಿನ ಮುಖ್ಯೋಪಧ್ಯಾಯ ಎಂ.ಬಿ. ಕೊಪ್ಪಳ ಹಾಗೂ ಸೂಫಿಯಾ ಬೇಗಂ ದಂಪತಿಯ ಪುತ್ರಿ. </p>.<p>ಪ್ರತಿವರ್ಷ ಜರುಗುವ ಲಿಂಡೌ ಜಾಗತಿಕ ಸಭೆಯಲ್ಲಿ ವಿಶ್ವದ ಆಯ್ದ 600 ಯುವ ವಿಜ್ಞಾನಿಗಳನ್ನು ಆಹ್ವಾನಿಸಿ ನೊಬೆಲ್ ಪ್ರಶಸ್ತಿ ಪುರಸ್ಕೃತ ದಿಗ್ಗಜರೊಂದಿಗೆ ಚರ್ಚಾಕೂಟ, ದುಂಡು ಮೇಜಿನ ಪರಿಷತ್ತುಗಳನ್ನು ನಡೆಸಲಾಗುತ್ತದೆ. ಈ ಸಲದ 74ನೇ ಸಮ್ಮೇಳನ ರಸಾಯನಶಾಸ್ತ್ರ ವಿಷಯಕ್ಕೆ ಮೀಸಲಿಟ್ಟಿದ್ದು, ಭಾರತದಿಂದ 29 ಯುವ ವಿಜ್ಞಾನಿಗಳು ತೆರಳಿದ್ದಾರೆ. ಆಯ್ಕೆಗೊಂಡಿರುವ ವಿದ್ಯಾರ್ಥಿಗಳ ಪ್ರವಾಸ, ಇನ್ನಿತರ ಖರ್ಚುಗಳನ್ನು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್ಟಿ) ನಿಭಾಯಿಸಲಿದೆ.</p>.<p>‘ಜಾಗತಿಕ ಮಟ್ಟದ ದುಂಡು ಮೇಜಿನ ಪರಿಷತ್ತಿನ ಮಗಳು ಆಯ್ಕೆಯಾಗಿದ್ದು ಅತ್ಯಂತ ಖುಷಿಯಾಗಿದೆ. ಮಗಳ ಇನ್ನಷ್ಟು ಸಾಧನೆಗೂ ಇದು ಪ್ರೇರಣೆಯಾಗಲಿದೆ’ ಎಂದು ಎಂ.ಬಿ. ಕೊಪ್ಪಳ ಖುಷಿ ಹಂಚಿಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>