ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ₹63 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

Last Updated 27 ಜೂನ್ 2020, 8:06 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ದಾಸನಾಳ ಸೇತುವೆ ಸಮೀಪ ಕರ್ನಾಟಕ ನೀರಾವರಿ ನಿಗಮದಿಂದ ₹63 ಕೋಟಿ ವೆಚ್ಚದ ತುಂಗಭದ್ರಾ ಎಡದಂಡೆ ಕಾಲುವೆಗೆ ಸಿ.ಸಿ ಲೈನಿಂಗ್ ಹಾಗೂ ಆಧುನೀಕರಣ ಕಾಮಗಾರಿಗೆ ಶುಕ್ರವಾರ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 24 ಕಿ.ಮೀ ಉದ್ದ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕು. ಕಳಪೆ ಕಾಮಗಾರಿ ಮಾಡಬಾರದು ಎಂದರು.

ಮುಂದಿನ ಎರಡು ಅವಧಿಗೆ ರೈತರಿಗೆ ಯಾವುದೇ ರೀತಿಯ ನೀರಿನ ಕೊರತೆ ಹಾಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ನೀರು ಕಳವು ಆಗುವುದರಿಂದ ಕಾಲುವೆ ಕೆಳಭಾಗದ ರೈತರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕಿದೆ. ಹೀಗಾಗಿ ನವಲಿ ಜಲಾಶಯ ನಿರ್ಮಾಣ ಮಾಡಲು ಡಿಪಿಆರ್‌ ಸಿದ್ಧಪಡಿಸಲಾಗಿತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT