ಗಂಗಾವತಿ: ತಾಲ್ಲೂಕಿನ ದಾಸನಾಳ ಸೇತುವೆ ಸಮೀಪ ಕರ್ನಾಟಕ ನೀರಾವರಿ ನಿಗಮದಿಂದ ₹63 ಕೋಟಿ ವೆಚ್ಚದ ತುಂಗಭದ್ರಾ ಎಡದಂಡೆ ಕಾಲುವೆಗೆ ಸಿ.ಸಿ ಲೈನಿಂಗ್ ಹಾಗೂ ಆಧುನೀಕರಣ ಕಾಮಗಾರಿಗೆ ಶುಕ್ರವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, 24 ಕಿ.ಮೀ ಉದ್ದ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕು. ಕಳಪೆ ಕಾಮಗಾರಿ ಮಾಡಬಾರದು ಎಂದರು.
ಮುಂದಿನ ಎರಡು ಅವಧಿಗೆ ರೈತರಿಗೆ ಯಾವುದೇ ರೀತಿಯ ನೀರಿನ ಕೊರತೆ ಹಾಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ನೀರು ಕಳವು ಆಗುವುದರಿಂದ ಕಾಲುವೆ ಕೆಳಭಾಗದ ರೈತರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕಿದೆ. ಹೀಗಾಗಿ ನವಲಿ ಜಲಾಶಯ ನಿರ್ಮಾಣ ಮಾಡಲು ಡಿಪಿಆರ್ ಸಿದ್ಧಪಡಿಸಲಾಗಿತ್ತಿದೆ ಎಂದು ಹೇಳಿದರು.