<p>ಗಂಗಾವತಿ: ‘ಬಾಬು ಜಗಜೀವನರಾಂ ಅವರು ಜನರ ಒಳಿತಿಗಾಗಿ ಕ್ರಾಂತಿಕಾರಿ ನಿಲುವುಗಳ ಜತೆ ದೇಶದ ಅಭಿವೃದ್ಧಿಗಾಗಿ ಹಲವು ನಿರ್ಧಾರ ಕೈಗೊಂಡು ಅನುಷ್ಠಾನಕ್ಕೆ ತಂದ ಅಪ್ರತಿಮ ನಾಯಕ’ ಎಂದು ಅಧ್ಯಾಪಕ ಚಂದ್ರಶೇಖರ ಅಭಿಪ್ರಾಯಪಟ್ಟರು.</p>.<p>ನಗರದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಭಾನುವಾರ ನಡೆದ ಭಾರತದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ, ‘ಬಾಬು ಜಗಜೀವನರಾಂ ಅವರು ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಬದಲಾವಣೆ ತಂದಿದ್ದಾರೆ’ ಎಂದರು.</p>.<p>ಗಂಗಾವತಿ ನಗರ ಪೊಲೀಸ್ ಠಾಣೆಯ ಪಿ.ಐ ಪ್ರಕಾಶ ಮಾಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೇಡ್-1 ಹುಲಗಪ್ಪ ಮಾತನಾಡಿದರು.</p>.<p>ಇದಕ್ಕೂ ಮುನ್ನ ಡಾ.ಬಾಬು ಜಗಜೀವನರಾಂ ವೃತ್ತದಲ್ಲಿ ಅವರ ಭಾವಚಿತ್ರ ಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಬಳಿಕ ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತೇಶಗೌಡ, ತಾ.ಪಂ ಇಒ ರಾಮರೆಡ್ಡಿ ಪಾಟೀಲ, ಸಮುದಾಯದ ಮುಖಂಡರಾದ ಹಂಪೇಶ ಹರಿಗೋಲು, ಸಿದ್ದಾಪುರ ಗಂಗಣ್ಣ, ಶಂಕರ ಸಿದ್ಧಾಪುರ ಸೇರಿ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಶಾಸಕರ ಗೈರು, ಮುಖಂಡರ ಆಕ್ರೋಶ: ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಜಿ.ಜನಾರ್ದನರೆಡ್ಡಿ ಗೈರು ಖಂಡನೀಯ ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ವೇದಿಕೆ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಬಳಿ ವಾಗ್ವಾದ ನಡೆಸಿದರು.</p>.<p>ಪೌರಾಯುಕ್ತರು, ತಾ.ಪಂ ಇಒ, ಗ್ರೇಡ್-2 ತಹಶೀಲ್ದಾರ್ ಪ್ರತಿಕ್ರಿಯಿಸಿ, ‘ಶಾಸಕರು ಕೆಲ ಅನಿವಾರ್ಯ ಕಾರಣಗಳಿಂದ ಬರಲು ಆಗುವುದಿಲ್ಲ. ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಹಾಜರಿರುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-35-1247141580</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ‘ಬಾಬು ಜಗಜೀವನರಾಂ ಅವರು ಜನರ ಒಳಿತಿಗಾಗಿ ಕ್ರಾಂತಿಕಾರಿ ನಿಲುವುಗಳ ಜತೆ ದೇಶದ ಅಭಿವೃದ್ಧಿಗಾಗಿ ಹಲವು ನಿರ್ಧಾರ ಕೈಗೊಂಡು ಅನುಷ್ಠಾನಕ್ಕೆ ತಂದ ಅಪ್ರತಿಮ ನಾಯಕ’ ಎಂದು ಅಧ್ಯಾಪಕ ಚಂದ್ರಶೇಖರ ಅಭಿಪ್ರಾಯಪಟ್ಟರು.</p>.<p>ನಗರದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಭಾನುವಾರ ನಡೆದ ಭಾರತದ ಮಾಜಿ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ, ‘ಬಾಬು ಜಗಜೀವನರಾಂ ಅವರು ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಬದಲಾವಣೆ ತಂದಿದ್ದಾರೆ’ ಎಂದರು.</p>.<p>ಗಂಗಾವತಿ ನಗರ ಪೊಲೀಸ್ ಠಾಣೆಯ ಪಿ.ಐ ಪ್ರಕಾಶ ಮಾಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೇಡ್-1 ಹುಲಗಪ್ಪ ಮಾತನಾಡಿದರು.</p>.<p>ಇದಕ್ಕೂ ಮುನ್ನ ಡಾ.ಬಾಬು ಜಗಜೀವನರಾಂ ವೃತ್ತದಲ್ಲಿ ಅವರ ಭಾವಚಿತ್ರ ಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಬಳಿಕ ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.</p>.<p>ಗ್ರೇಡ್-2 ತಹಶೀಲ್ದಾರ್ ಮಹಾಂತೇಶಗೌಡ, ತಾ.ಪಂ ಇಒ ರಾಮರೆಡ್ಡಿ ಪಾಟೀಲ, ಸಮುದಾಯದ ಮುಖಂಡರಾದ ಹಂಪೇಶ ಹರಿಗೋಲು, ಸಿದ್ದಾಪುರ ಗಂಗಣ್ಣ, ಶಂಕರ ಸಿದ್ಧಾಪುರ ಸೇರಿ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p>ಶಾಸಕರ ಗೈರು, ಮುಖಂಡರ ಆಕ್ರೋಶ: ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಜಿ.ಜನಾರ್ದನರೆಡ್ಡಿ ಗೈರು ಖಂಡನೀಯ ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ವೇದಿಕೆ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಬಳಿ ವಾಗ್ವಾದ ನಡೆಸಿದರು.</p>.<p>ಪೌರಾಯುಕ್ತರು, ತಾ.ಪಂ ಇಒ, ಗ್ರೇಡ್-2 ತಹಶೀಲ್ದಾರ್ ಪ್ರತಿಕ್ರಿಯಿಸಿ, ‘ಶಾಸಕರು ಕೆಲ ಅನಿವಾರ್ಯ ಕಾರಣಗಳಿಂದ ಬರಲು ಆಗುವುದಿಲ್ಲ. ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಹಾಜರಿರುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-35-1247141580</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>