<p>ಗಂಗಾವತಿ: ಬಾಲ್ಯವಿವಾಹ ಮಾಡಿದ ಆರೋಪ ಸಾಬೀತಾಗಿದ್ದ ಪ್ರಕರಣವೊಂದರಲ್ಲಿ ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ನಾಗೇಶ ಪಾಟೀಲ ಅವರು ಬಾಲಕಿಯ ತಂದೆ, ಯುವಕ ಮತ್ತು ಯುವಕನ ತಾಯಿಗೆ ಶಿಕ್ಷೆ ವಿಧಿಸಿ, ಆದೇಶ ನೀಡಿದ್ದಾರೆ.</p>.<p>ಬಾಲಕಿಯ ತಂದೆ ಮಹೇಶ ಬಸಪ್ಪ ಕುಡತ್ಲಿ, ಯುವಕ ಈರಣ್ಣ ಕೃಷ್ಣಪ್ಪನಾಯಕ, ಯುವಕನ ತಾಯಿ ದುರ್ಗಮ್ಮ ಕೃಷ್ಣಪ್ಪ ಶಿಕ್ಷೆಗೊಳಗಾದವರು.</p>.<p>2021ರ ಮೇ 5ರಂದು ಮಹೇಶ, ದುರ್ಗಮ್ಮ, ತನ್ನ ಮಗ ಈರಣ್ಣನ ಜೊತೆ ಕೃಷ್ಣದೇವರಾಯ ನಗರದ ತಮ್ಮ ನಿವಾಸದಲ್ಲಿ ಬಾಲಕಿಯ ವಿವಾಹ ಮಾಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ, ಅಂದಿನ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐಗಳಾದ ಯಲ್ಲಪ್ಪ, ಶಾರವ್ವ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಬಾಲ್ಯವಿವಾಹ ನಿಷೇಧ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ 2 ವರ್ಷ ಜೈಲು, ತಲಾ ₹10 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನಸ್ವಾಮಿ ದೇವಯ್ಯಸ್ವಾಮಿ ಹಿರೇಮಠ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-35-1232741033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಬಾಲ್ಯವಿವಾಹ ಮಾಡಿದ ಆರೋಪ ಸಾಬೀತಾಗಿದ್ದ ಪ್ರಕರಣವೊಂದರಲ್ಲಿ ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ನಾಗೇಶ ಪಾಟೀಲ ಅವರು ಬಾಲಕಿಯ ತಂದೆ, ಯುವಕ ಮತ್ತು ಯುವಕನ ತಾಯಿಗೆ ಶಿಕ್ಷೆ ವಿಧಿಸಿ, ಆದೇಶ ನೀಡಿದ್ದಾರೆ.</p>.<p>ಬಾಲಕಿಯ ತಂದೆ ಮಹೇಶ ಬಸಪ್ಪ ಕುಡತ್ಲಿ, ಯುವಕ ಈರಣ್ಣ ಕೃಷ್ಣಪ್ಪನಾಯಕ, ಯುವಕನ ತಾಯಿ ದುರ್ಗಮ್ಮ ಕೃಷ್ಣಪ್ಪ ಶಿಕ್ಷೆಗೊಳಗಾದವರು.</p>.<p>2021ರ ಮೇ 5ರಂದು ಮಹೇಶ, ದುರ್ಗಮ್ಮ, ತನ್ನ ಮಗ ಈರಣ್ಣನ ಜೊತೆ ಕೃಷ್ಣದೇವರಾಯ ನಗರದ ತಮ್ಮ ನಿವಾಸದಲ್ಲಿ ಬಾಲಕಿಯ ವಿವಾಹ ಮಾಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ, ಅಂದಿನ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐಗಳಾದ ಯಲ್ಲಪ್ಪ, ಶಾರವ್ವ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಬಾಲ್ಯವಿವಾಹ ನಿಷೇಧ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ 2 ವರ್ಷ ಜೈಲು, ತಲಾ ₹10 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನಸ್ವಾಮಿ ದೇವಯ್ಯಸ್ವಾಮಿ ಹಿರೇಮಠ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-35-1232741033</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>