<p><strong>ಗಂಗಾವತಿ</strong>: ‘ಸೌಹಾರ್ದ ಸಹಕಾರದ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದರೆ, ಅಲ್ಲಿನ ಆಡಳಿತ ಮಂಡಳಿ, ಸಿಬ್ಬಂದಿ ಉತ್ತಮ ಕಾರ್ಯನಿರ್ವಹಣೆ ಅಗತ್ಯ’ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಿ.ಶ್ರೀಧರ ಕೆಸರಹಟ್ಟಿ ಹೇಳಿದರು.</p>.<p>ನಗರದಲ್ಲಿ ಶನಿವಾರ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಕಲಬುರಗಿ ಪ್ರಾಂತೀಯ ಕಚೇರಿ ವತಿಯಿಂದ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕಿನ ಸೌಹಾರ್ದ ಸಹಕಾರ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ್ದ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೌಹಾರ್ದ ಸಹಕಾರ ಬ್ಯಾಂಕ್ ಕೇವಲ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೇ, ಸಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ಸಹ ಭಾಗವಹಿಸಬೇಕು. ಎಲ್ಲರೂ ತರಬೇತಿಯ ಸದುಪಯೋಗ ಪಡೆಯಬೇಕು’ ಎಂದರು.</p>.<p>ಸಹಕಾರಿಗಳ ಒಕ್ಕೂಟದ ಉಪಾಧ್ಯಕ್ಷ ಮಹಾಲಿಂಗಪ್ಪ, ನಿರ್ದೇಶಕ ಕುಮಾರೆಪ್ಪ ಸಿಂಗನಾಳ, ನಾಗಲಿಂಗಪ್ಪ ಪತ್ತಾರ, ಲೋಕೆಶಪ್ಪ, ಶರಣಬಸವ, ಸಂಪನ್ಮೂಲ ವ್ಯಕ್ತಿ ರಘುನಂದ, ಸುನೀಲ ಪತ್ತಾರ, ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಓಂಕಾರ್ ಧರಣಿ ಸೇರಿದಂತೆ 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-35-423574469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ‘ಸೌಹಾರ್ದ ಸಹಕಾರದ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದರೆ, ಅಲ್ಲಿನ ಆಡಳಿತ ಮಂಡಳಿ, ಸಿಬ್ಬಂದಿ ಉತ್ತಮ ಕಾರ್ಯನಿರ್ವಹಣೆ ಅಗತ್ಯ’ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಿ.ಶ್ರೀಧರ ಕೆಸರಹಟ್ಟಿ ಹೇಳಿದರು.</p>.<p>ನಗರದಲ್ಲಿ ಶನಿವಾರ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತ ಕಲಬುರಗಿ ಪ್ರಾಂತೀಯ ಕಚೇರಿ ವತಿಯಿಂದ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕಿನ ಸೌಹಾರ್ದ ಸಹಕಾರ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ್ದ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೌಹಾರ್ದ ಸಹಕಾರ ಬ್ಯಾಂಕ್ ಕೇವಲ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೇ, ಸಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ಸಹ ಭಾಗವಹಿಸಬೇಕು. ಎಲ್ಲರೂ ತರಬೇತಿಯ ಸದುಪಯೋಗ ಪಡೆಯಬೇಕು’ ಎಂದರು.</p>.<p>ಸಹಕಾರಿಗಳ ಒಕ್ಕೂಟದ ಉಪಾಧ್ಯಕ್ಷ ಮಹಾಲಿಂಗಪ್ಪ, ನಿರ್ದೇಶಕ ಕುಮಾರೆಪ್ಪ ಸಿಂಗನಾಳ, ನಾಗಲಿಂಗಪ್ಪ ಪತ್ತಾರ, ಲೋಕೆಶಪ್ಪ, ಶರಣಬಸವ, ಸಂಪನ್ಮೂಲ ವ್ಯಕ್ತಿ ರಘುನಂದ, ಸುನೀಲ ಪತ್ತಾರ, ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಓಂಕಾರ್ ಧರಣಿ ಸೇರಿದಂತೆ 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-35-423574469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>