<p><strong>ಗಂಗಾವತಿ:</strong> ಇಲ್ಲಿನ ಗಾಂಧಿ ವೃತ್ತದಲ್ಲಿ ಶುಕ್ರವಾರ ರಾತ್ರಿ 2 ಗಂಟೆ ವೇಳೆ ಪೊಲೀಸ್ ಅಧಿಕಾರಿಗಳು ಗಣೇಶ ಮೂರ್ತಿಗಳ ವಿಸರ್ಜನೆಯ ಡಿಜೆ ಬಂದ್ ಮಾಡಿಸಲು ಮುಂದಾದಾಗ ಯುವಕರು ಪ್ರತಿಭಟನೆ ನಡೆಸಿದರು. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.<p>ಛಲವಾದಿ ಓಣಿ ಯುವಕ ಮಂಡಳಿಯವರು ಗಣೇಶ ಮೂರ್ತಿಯನ್ನು ಮೆರವಣಿಗೆ ಗಾಂಧಿ ವೃತ್ತಕ್ಕೆ ಆಗಮಿಸುವ ವೇಳೆಗಾಗಲೇ ರಾತ್ರಿ 2 ಗಂಟೆ ಆಗಿತ್ತು. ಹೀಗಾಗಿ ಪೊಲೀಸ್ ಡಿಜಿ ಬಂದ್ ಮಾಡಿ ಮೆರವಣಿಗೆ ಮುಂದುವರಿಸಿ ಎಂದು ಸೂಚಿಸಿದ್ದಾರೆ. ಇದಕ್ಕೆ ಒಪ್ಪದ ಯುವಕರು ಡಿಜೆ ಹಾಕಿ ಡ್ಯಾನ್ಸ್ ಮಾಡಲು ಮುಂದಾಗಿದ್ದಾರೆ. ಬಳಿಕ ಒತ್ತಾಯದಿಂದ ಪೊಲೀಸರು ಡಿಜೆ ಬಂದ್ ಮಾಡಿಸಿದ್ದರಿಂದ ಯುವಕರು ಪ್ರತಿಭಟನೆ ನಡೆಸಿದರು.</p>.<p>ಪೊಲೀಸರ ವರ್ತನೆ ಖಂಡಿಸಿ ‘ದಲಿತರ ಗಣೇಶ ಹಬ್ಬ ಆಚರಣೆಗೆ ಪೊಲೀಸರಿಂದ ವಿರೋಧ’ ಎಂದು ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p>.<p>ಅಧಿಕಾರಿಗಳು ಮನವೊಲಿಸಲು ಮುಂದಾದರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನೆ ಚದುರಿಸಿದರು.</p>.<p>ದಲಿತ ಯುವಕ ಸಂಘದವರು ಡಿಜೆ ಬಂದ್ ಮಾಡಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿಕೊಂಡು ಡಿಜೆ ಹಾಕುವವರೆಗೂ ಗಣೇಶ ವಿಸರ್ಜನೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಪೊಲೀಸ್ ಇಲಾಖೆ ಅಧಿಕಾರಿಗಳು ಮನವೊಲಿಸಿ ಡಿಜೆ ಬಂದ್ ಮಾಡಿ ವಿಸರ್ಜನೆಗೆ ಕಳುಹಿಸಿದರು.</p>.<p>ಸ್ಥಳದಲ್ಲಿ ಎಸ್ಪಿ, ಡಿವೈಎಸ್ಪಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಇಲ್ಲಿನ ಗಾಂಧಿ ವೃತ್ತದಲ್ಲಿ ಶುಕ್ರವಾರ ರಾತ್ರಿ 2 ಗಂಟೆ ವೇಳೆ ಪೊಲೀಸ್ ಅಧಿಕಾರಿಗಳು ಗಣೇಶ ಮೂರ್ತಿಗಳ ವಿಸರ್ಜನೆಯ ಡಿಜೆ ಬಂದ್ ಮಾಡಿಸಲು ಮುಂದಾದಾಗ ಯುವಕರು ಪ್ರತಿಭಟನೆ ನಡೆಸಿದರು. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.<p>ಛಲವಾದಿ ಓಣಿ ಯುವಕ ಮಂಡಳಿಯವರು ಗಣೇಶ ಮೂರ್ತಿಯನ್ನು ಮೆರವಣಿಗೆ ಗಾಂಧಿ ವೃತ್ತಕ್ಕೆ ಆಗಮಿಸುವ ವೇಳೆಗಾಗಲೇ ರಾತ್ರಿ 2 ಗಂಟೆ ಆಗಿತ್ತು. ಹೀಗಾಗಿ ಪೊಲೀಸ್ ಡಿಜಿ ಬಂದ್ ಮಾಡಿ ಮೆರವಣಿಗೆ ಮುಂದುವರಿಸಿ ಎಂದು ಸೂಚಿಸಿದ್ದಾರೆ. ಇದಕ್ಕೆ ಒಪ್ಪದ ಯುವಕರು ಡಿಜೆ ಹಾಕಿ ಡ್ಯಾನ್ಸ್ ಮಾಡಲು ಮುಂದಾಗಿದ್ದಾರೆ. ಬಳಿಕ ಒತ್ತಾಯದಿಂದ ಪೊಲೀಸರು ಡಿಜೆ ಬಂದ್ ಮಾಡಿಸಿದ್ದರಿಂದ ಯುವಕರು ಪ್ರತಿಭಟನೆ ನಡೆಸಿದರು.</p>.<p>ಪೊಲೀಸರ ವರ್ತನೆ ಖಂಡಿಸಿ ‘ದಲಿತರ ಗಣೇಶ ಹಬ್ಬ ಆಚರಣೆಗೆ ಪೊಲೀಸರಿಂದ ವಿರೋಧ’ ಎಂದು ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p>.<p>ಅಧಿಕಾರಿಗಳು ಮನವೊಲಿಸಲು ಮುಂದಾದರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನೆ ಚದುರಿಸಿದರು.</p>.<p>ದಲಿತ ಯುವಕ ಸಂಘದವರು ಡಿಜೆ ಬಂದ್ ಮಾಡಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿಕೊಂಡು ಡಿಜೆ ಹಾಕುವವರೆಗೂ ಗಣೇಶ ವಿಸರ್ಜನೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಪೊಲೀಸ್ ಇಲಾಖೆ ಅಧಿಕಾರಿಗಳು ಮನವೊಲಿಸಿ ಡಿಜೆ ಬಂದ್ ಮಾಡಿ ವಿಸರ್ಜನೆಗೆ ಕಳುಹಿಸಿದರು.</p>.<p>ಸ್ಥಳದಲ್ಲಿ ಎಸ್ಪಿ, ಡಿವೈಎಸ್ಪಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>