ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಬೋನಿಗೆ ಬಿದ್ದ ಚಿರತೆ

Last Updated 18 ಡಿಸೆಂಬರ್ 2020, 5:14 IST
ಅಕ್ಷರ ಗಾತ್ರ

ಗಂಗಾವತಿ : ತಾಲ್ಲೂಕಿನ ಆನೆಗೊಂದಿಯ ಶ್ರೀ ಆದಿಶಕ್ತಿ ದುರ್ಗಾದೇವಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಸೆರೆಯಾಗಿದೆ.

ಕಳೆದ ಎರಡು ತಿಂಗಳಿಂದ ಆನೆಗೊಂದಿ ವ್ಯಾಪ್ತಿಯಲ್ಲಿ ಮನುಷ್ಯರ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುವ ಮೂಲಕ ಚಿರತೆಯು ಭಯವನ್ನು ಮೂಡಿಸಿತ್ತು. ಇದರಿಂದ ಅಂಜನಾದ್ರಿ ಹಾಗೂ ಆದಿಶಕ್ತಿ ದುರ್ಗಾದೇವಿ ದೇಗುಲದ ದರ್ಶನವನ್ನು ಬಂದ್ ಮಾಡಲಾಗಿತ್ತು.

ಜೊತೆಗೆ ಕಳೆದ ತಿಂಗಳು ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆಯು ಕೊಂದು ಹಾಕಿತ್ತು. ಅದೇ ಸ್ಥಳದಲ್ಲಿ ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿಗೆ ಇದೀಗ ಚಿರತೆಯು ಸೆರೆಯಾಗಿದೆ. ಇನ್ನೂ ನಾಲ್ಕೈದು ಚಿರತೆಗಳು ಇದ್ದು, ತಾಲ್ಲೂಕಿನಲ್ಲಿ ಒಟ್ಟು ಏಳು ಬೋನ್ ಗಳನ್ನು ಅಳವಡಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ ಪ್ರಜಾವಾಣಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT