ಸರ್ವಧರ್ಮಗಳ ಬೀಡಾದ ಕೊಪ್ಪಳದ ಭಾವೈಕ್ಯದ ನೆಲದಲ್ಲಿ ಈ ಬಾರಿ ನಡೆದ 208ನೇ ಮಹಾರಥೋತ್ಸವಕ್ಕೆ ಸಾಕ್ಷಿಯಾಗಲು ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಸಂಜೆ ವೇಳೆಗೆ ಸಂಖ್ಯೆ ಮತ್ತಷ್ಟು ಏರಿಕೆಯಾಗಿತ್ತು. ಜಾತ್ರೆಯ ಸಂಭ್ರಮದಲ್ಲಿ ಮಿಂದೆದ್ದ ಜನರು ಹರಕೆಗಳನ್ನು ಸಲ್ಲಿಸಿದರು. ಇತ್ತ ಕಡೆ ವ್ಯಾಪಾರ, ವಹಿವಾಟುಗಳು ಜೋರಾಗಿಯೇ ನಡೆಯುತ್ತಿತ್ತು.