ಗುರುವಾರ ಬೆಳಿಗ್ಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮಳೆಮಲ್ಲೇಶ್ವರ ದೇವಸ್ಥಾನದಿಂದ ಅಶೋಕ್ ಸರ್ಕಲ್ ಹಾಗೂ ಗಡಿಯಾರ ಕಂಬದ ಮಾರ್ಗದ ಮೂಲಕ ಗವಿಮಠದ ತನಕ ಪಾದಯಾತ್ರೆ ನಡೆಸಿದರು. ಸ್ವಾಮೀಜಿ ಜೊತೆಗೆ ಮಠದ ಭಕ್ತರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹೆಜ್ಜೆ ಹಾಕಿದರು. ಬೆಳಿಗ್ಗೆಯಿಂದ ಸಂಜೆ ತನಕ ಗವಿಸಿದ್ದೇಶ್ವರ ಆಯುರ್ವೇದ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.