ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸಹಿ ಮಾಡಿ, ಠರಾವಿಗೆ ಜಿಲ್ಲಾಧಿಕಾರಿಗೆ ಕಳಿಸುವಂತೆ ಕ್ಲರ್ಕ್ ಸಾಧಿಕ್ ಅವರಿಗೆ ನೀಡಲಾಗಿತ್ತು. ಇದೀಗ ದಾಖಲೆಯೇ ಕಳೆದು ಹೋಗಿದೆ ಎನ್ನುತ್ತಿದ್ದಾರೆ. ಸಾಧಿಕ್ ಅವರನ್ನು ಕೇಳಿದರೆ ಪೌರಾಯುಕ್ತರಿಗೆ ನೀಡಿದ್ದೇನೆ ಎನ್ನುತ್ತಾರೆ. ಪೌರಾಯುಕ್ತರು ನನಗೆ ತಲುಪಿಲ್ಲ ಎಂದು ಹೇಳುತ್ತಾರೆ. ನಿಜವಾಗಿ ಕಡತ ಕಳೆದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.