1997-98ರಲ್ಲಿ ಅಂದಿನ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರೈಲು ಸಂಪರ್ಕ ಕಾಮಗಾರಿಗೆ ಚಾಲನೆ ನೀಡಿದರು. ರೈಲು ಹಳಿ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳು ವೇಗವಾಗಿ ಪೂರ್ಣಗೊಳಿಸಲು ಆಗಿನ ಸಂಸದ ಬಸವರಾಜ ರಾಯರಡ್ಡಿ, ಶಾಸಕ ಸಂಗಣ್ಣ ಕರಡಿ ಒತ್ತು ನೀಡಿದರು. ಸಂಸದರಾಗಿದ್ದ ಎಚ್.ಜಿ.ರಾಮುಲು, ಕೆ. ವಿರೂಪಾಕ್ಷಪ್ಪ ಮತ್ತು ಶಿವರಾಮಗೌಡ ಶ್ರಮಿಸಿದರು.