<p><strong>ಕುಷ್ಟಗಿ: </strong>ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಕಲಾವತಿ ಮೆಣೆದಾಳ, ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ, ಸುರಕ್ಷಾ ಪರಿಕರಗಳು ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.</p>.<p>ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವುಸುಗಳನ್ನು ಹಾಗೂ ಪಿಪಿಇ ಕಿಟ್ಗಳನ್ನು ನೀಡಬೇಕು. ಕೋವಿಡ್ ಭಾಗವಾಗಿ ದುಡಿಯುತ್ತಿದ್ದು ಪ್ರೋತ್ಸಾಹಧನ ನೀಡಬೇಕು. ಕೊರೊನಾ ವಾರಿಯರ್ಸ್ ಆಗಿರುವುದರಿಂದ ₹50 ಲಕ್ಷ ವಿಮೆ ಸೌಲಭ್ಯ ಹಾಗೂ ಸೋಂಕಿತರಾಗಿದ್ದರೆ ₹5 ಲಕ್ಷ ಪರಿಹಾರ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಕಾಯಂಗೊಳಿಸುವುದು ಎಂದು ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಯ್ಯಾಪುರ, ಈ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದರು.</p>.<p>ಅಂಗನವಾಡಿ ನೌಕರರ ಸಂಘದ ಪ್ರಮುಖರಾ ಜಯಶ್ರಿ ಆಶ್ರಿತ, ಲಲಿತಾ ಚಳಗೇರಿ, ಉಮಾ ಅಂಗಡಿ, ರೇಣುಕಾ ಮನ್ನೇರಾಳ, ವಿದ್ಯಾಶ್ರಿ ಚಳಗೇರಿ, ಶಾರದಾ ಹೂಲಗೇರಿ, ಅನ್ನಪೂರ್ಣ ಗುಡಿ, ನಿಂಗಮ್ಮ, ನಾಗರತ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ: </strong>ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಕಲಾವತಿ ಮೆಣೆದಾಳ, ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ, ಸುರಕ್ಷಾ ಪರಿಕರಗಳು ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.</p>.<p>ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವುಸುಗಳನ್ನು ಹಾಗೂ ಪಿಪಿಇ ಕಿಟ್ಗಳನ್ನು ನೀಡಬೇಕು. ಕೋವಿಡ್ ಭಾಗವಾಗಿ ದುಡಿಯುತ್ತಿದ್ದು ಪ್ರೋತ್ಸಾಹಧನ ನೀಡಬೇಕು. ಕೊರೊನಾ ವಾರಿಯರ್ಸ್ ಆಗಿರುವುದರಿಂದ ₹50 ಲಕ್ಷ ವಿಮೆ ಸೌಲಭ್ಯ ಹಾಗೂ ಸೋಂಕಿತರಾಗಿದ್ದರೆ ₹5 ಲಕ್ಷ ಪರಿಹಾರ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಕಾಯಂಗೊಳಿಸುವುದು ಎಂದು ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಯ್ಯಾಪುರ, ಈ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದರು.</p>.<p>ಅಂಗನವಾಡಿ ನೌಕರರ ಸಂಘದ ಪ್ರಮುಖರಾ ಜಯಶ್ರಿ ಆಶ್ರಿತ, ಲಲಿತಾ ಚಳಗೇರಿ, ಉಮಾ ಅಂಗಡಿ, ರೇಣುಕಾ ಮನ್ನೇರಾಳ, ವಿದ್ಯಾಶ್ರಿ ಚಳಗೇರಿ, ಶಾರದಾ ಹೂಲಗೇರಿ, ಅನ್ನಪೂರ್ಣ ಗುಡಿ, ನಿಂಗಮ್ಮ, ನಾಗರತ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>