ಕುಷ್ಟಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಕಲಾವತಿ ಮೆಣೆದಾಳ, ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ, ಸುರಕ್ಷಾ ಪರಿಕರಗಳು ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.
ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್, ಕೈಗವುಸುಗಳನ್ನು ಹಾಗೂ ಪಿಪಿಇ ಕಿಟ್ಗಳನ್ನು ನೀಡಬೇಕು. ಕೋವಿಡ್ ಭಾಗವಾಗಿ ದುಡಿಯುತ್ತಿದ್ದು ಪ್ರೋತ್ಸಾಹಧನ ನೀಡಬೇಕು. ಕೊರೊನಾ ವಾರಿಯರ್ಸ್ ಆಗಿರುವುದರಿಂದ ₹50 ಲಕ್ಷ ವಿಮೆ ಸೌಲಭ್ಯ ಹಾಗೂ ಸೋಂಕಿತರಾಗಿದ್ದರೆ ₹5 ಲಕ್ಷ ಪರಿಹಾರ ನೀಡಬೇಕು. ಕಾರ್ಯಕರ್ತೆಯರ ಸೇವೆಯನ್ನು ಕಾಯಂಗೊಳಿಸುವುದು ಎಂದು ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಯ್ಯಾಪುರ, ಈ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದರು.