<p><strong>ಅಳವಂಡಿ: ‘</strong>ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ; ಪ್ರಾಣಿ-ಪಕ್ಷಿಗಳು ಕೂಡ ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಪ್ರಾಣಿ–ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತಿಯೊಬ್ಬರೂ ಮುಂದಾಗಬೇಕು’ ಎಂದು ಮರುಳಾರಾಧ್ಯ ಶಿವಾಚಾರ್ಯರು ಹೇಳಿದರು.</p>.<p>ಗ್ರಾಮದ ಸಿದ್ದೇಶ್ವರ ಮಠ ಹಾಗೂ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಮಹಿಳಾ ಧ್ವನಿ ಸಂಸ್ಥೆಯಿಂದ ಪ್ಲಾಸ್ಟಿಕ್ ಬುಟ್ಟಿಗಳನ್ನು ಗಿಡಮರಕ್ಕೆ ಕಟ್ಟಿ ನೀರು ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬಿಸಿಲಿನ ತಾಪಕ್ಕೆ ಪ್ರಾಣಿ ಪಕ್ಷಿಗಳು ಬಾಯಾರಿ ಕುಡಿಯುವ ನೀರು ಹುಡುಕಿಕೊಂಡು ಅಲೆದಾಡುವುದು ಸಹಜ. ಹಾಗಾಗಿ ಸಾರ್ವಜನಿಕರು, ಸಂಘ–ಸಂಸ್ಥೆಗಳು ತಮ್ಮ ಮನೆಯ ಮುಂದಿನ ಗಿಡಮರಗಳಿಗೆ, ಮನೆಯ ಕಾಂಪೌಂಡ್ ಮೇಲೆ ನೀರಿನ ತೊಟ್ಟಿಯನ್ನು ಇಟ್ಟು ಪ್ರಾಣಿ ಪಕ್ಷಿಗಳ ನೀರಿನ ದಾಹ ನೀಗಿಸಲು ಮುಂದಾಗಬೇಕು’ ಎಂದರು</p>.<p>ಮಹಿಳಾ ಧ್ವನಿ ಸಂಸ್ಥಾಪಕಿ ಪ್ರಿಯದರ್ಶಿನಿ ಮಾತನಾಡಿ, ‘ಜನರು ಸಹ ಬೇಸಿಗೆ ಬಿಸಿಲಿನ ತಾಪದಲ್ಲಿ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಮೂಕ ಪ್ರಾಣಿಗಳ ವೇದನೆ ಮಾತ್ರ ಹೇಳತಿರದಂತಾಗಿದೆ. ಹಾಗಾಗಿ ಸಂಸ್ಥೆಯ ವತಿಯಿಂದ ಪ್ರಾಣಿ ಪಕ್ಷಿಗಳಿಗೆ ಪ್ಲಾಸ್ಟಿಕ್ ಬುಟ್ಟಿಯನ್ನು ಕಟ್ಟುವ ಕಾರ್ಯ ಮಾಡುತ್ತಿದ್ದೇವೆ’ ಎಂದರು.</p>.<p>ಪ್ರಮುಖರಾದ ಬಿ.ಎನ್. ಹೊರಪೇಟಿ, ರಮೇಶ ಆವೋಜಿ, ನೀಲಪ್ಪ ಹಕ್ಕಂಡಿ, ಮಲ್ಲಮ್ಮ, ಗೀತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ: ‘</strong>ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿಗೆ ಹಾಹಾಕಾರ ಉಂಟಾಗಿದೆ. ಮನುಷ್ಯರು ಮಾತ್ರವಲ್ಲ; ಪ್ರಾಣಿ-ಪಕ್ಷಿಗಳು ಕೂಡ ಜೀವಜಲಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಪ್ರಾಣಿ–ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರತಿಯೊಬ್ಬರೂ ಮುಂದಾಗಬೇಕು’ ಎಂದು ಮರುಳಾರಾಧ್ಯ ಶಿವಾಚಾರ್ಯರು ಹೇಳಿದರು.</p>.<p>ಗ್ರಾಮದ ಸಿದ್ದೇಶ್ವರ ಮಠ ಹಾಗೂ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಮಹಿಳಾ ಧ್ವನಿ ಸಂಸ್ಥೆಯಿಂದ ಪ್ಲಾಸ್ಟಿಕ್ ಬುಟ್ಟಿಗಳನ್ನು ಗಿಡಮರಕ್ಕೆ ಕಟ್ಟಿ ನೀರು ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬಿಸಿಲಿನ ತಾಪಕ್ಕೆ ಪ್ರಾಣಿ ಪಕ್ಷಿಗಳು ಬಾಯಾರಿ ಕುಡಿಯುವ ನೀರು ಹುಡುಕಿಕೊಂಡು ಅಲೆದಾಡುವುದು ಸಹಜ. ಹಾಗಾಗಿ ಸಾರ್ವಜನಿಕರು, ಸಂಘ–ಸಂಸ್ಥೆಗಳು ತಮ್ಮ ಮನೆಯ ಮುಂದಿನ ಗಿಡಮರಗಳಿಗೆ, ಮನೆಯ ಕಾಂಪೌಂಡ್ ಮೇಲೆ ನೀರಿನ ತೊಟ್ಟಿಯನ್ನು ಇಟ್ಟು ಪ್ರಾಣಿ ಪಕ್ಷಿಗಳ ನೀರಿನ ದಾಹ ನೀಗಿಸಲು ಮುಂದಾಗಬೇಕು’ ಎಂದರು</p>.<p>ಮಹಿಳಾ ಧ್ವನಿ ಸಂಸ್ಥಾಪಕಿ ಪ್ರಿಯದರ್ಶಿನಿ ಮಾತನಾಡಿ, ‘ಜನರು ಸಹ ಬೇಸಿಗೆ ಬಿಸಿಲಿನ ತಾಪದಲ್ಲಿ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಮೂಕ ಪ್ರಾಣಿಗಳ ವೇದನೆ ಮಾತ್ರ ಹೇಳತಿರದಂತಾಗಿದೆ. ಹಾಗಾಗಿ ಸಂಸ್ಥೆಯ ವತಿಯಿಂದ ಪ್ರಾಣಿ ಪಕ್ಷಿಗಳಿಗೆ ಪ್ಲಾಸ್ಟಿಕ್ ಬುಟ್ಟಿಯನ್ನು ಕಟ್ಟುವ ಕಾರ್ಯ ಮಾಡುತ್ತಿದ್ದೇವೆ’ ಎಂದರು.</p>.<p>ಪ್ರಮುಖರಾದ ಬಿ.ಎನ್. ಹೊರಪೇಟಿ, ರಮೇಶ ಆವೋಜಿ, ನೀಲಪ್ಪ ಹಕ್ಕಂಡಿ, ಮಲ್ಲಮ್ಮ, ಗೀತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>