<p><strong>ಕಾರಟಗಿ:</strong> ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ.</p>.<p>ಪಟ್ಟಣದ ಕಸ್ತೂರಬಾ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಕೆ.ರೇಖಾ ಪರಶುರಾಮ ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ನಡೆದ ಪರೀಕ್ಷೆಯಲ್ಲಿ ಶೇ 95.6ರಷ್ಟು ಅಂಕ ಗಳಿಸಿ, ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.</p>.<p>ವಿದ್ಯಾರ್ಥಿನಿಯ ತಂದೆ ಪರಶುರಾಮ ಕೂಲಿ ಕಾರ್ಮಿಕ. ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೂವರು ಹೆಣ್ಣು ಮಕ್ಕಳನ್ನು ಓದಿಸುತ್ತಾ ದೈನಂದಿನ ಬದುಕು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿನಿ ರೇಖಾ ಸವಾಲುಗಳನ್ನು ಮೆಟ್ಟಿನಿಂತು ನಿರಂತರ ಅಧ್ಯಯನ, ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ವಿದ್ಯಾರ್ಥಿನಿ ರೇಖಾಗೆ ಕಾಲೇಜಿನ ಶುಲ್ಕ ಭರಿಸುವುದೇ ಸವಾಲಾಗಿ, ವಿದ್ಯಾಭ್ಯಾಸವನ್ನೇ ನಿಲ್ಲಿಸುವ ಸ್ಥಿತಿ ಎದುರಾಗಿತ್ತು. ಇದೆಲ್ಲವನ್ನೂ ಮೆಟ್ಟಿನಿಂತು ಚಿನ್ನದ ಪದಕದ ಕಿರೀಟವನ್ನು ಇದೀಗ ಹೊತ್ತಿದ್ದಾರೆ. </p>.<p>ವಿದ್ಯಾರ್ಥಿನಿ ರೇಖಾ ಪ್ರತಿಕ್ರಿಯಿಸಿ,‘ನಿರಂತರ ಅಧ್ಯಯನ, ಉಪನ್ಯಾಸಕರ ಮಾರ್ಗದರ್ಶನದಿಂದ ಗುರಿ ಸಾಧಿಸಲು ಸಾಧ್ಯವಾಗಿದೆ. ಅವರೆಲ್ಲರಿಗೂ ಸದಾ ಋಣಿಯಾಗಿರುತ್ತೇನೆ’ ಎಂದರು.</p>.<p>ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥರು, ಉಪನ್ಯಾಸಕರು ವಿದ್ಯಾರ್ಥಿನಿ ರೇಖಾ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ.</p>.<p>ಪಟ್ಟಣದ ಕಸ್ತೂರಬಾ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಕೆ.ರೇಖಾ ಪರಶುರಾಮ ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ನಡೆದ ಪರೀಕ್ಷೆಯಲ್ಲಿ ಶೇ 95.6ರಷ್ಟು ಅಂಕ ಗಳಿಸಿ, ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.</p>.<p>ವಿದ್ಯಾರ್ಥಿನಿಯ ತಂದೆ ಪರಶುರಾಮ ಕೂಲಿ ಕಾರ್ಮಿಕ. ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೂವರು ಹೆಣ್ಣು ಮಕ್ಕಳನ್ನು ಓದಿಸುತ್ತಾ ದೈನಂದಿನ ಬದುಕು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿನಿ ರೇಖಾ ಸವಾಲುಗಳನ್ನು ಮೆಟ್ಟಿನಿಂತು ನಿರಂತರ ಅಧ್ಯಯನ, ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ವಿದ್ಯಾರ್ಥಿನಿ ರೇಖಾಗೆ ಕಾಲೇಜಿನ ಶುಲ್ಕ ಭರಿಸುವುದೇ ಸವಾಲಾಗಿ, ವಿದ್ಯಾಭ್ಯಾಸವನ್ನೇ ನಿಲ್ಲಿಸುವ ಸ್ಥಿತಿ ಎದುರಾಗಿತ್ತು. ಇದೆಲ್ಲವನ್ನೂ ಮೆಟ್ಟಿನಿಂತು ಚಿನ್ನದ ಪದಕದ ಕಿರೀಟವನ್ನು ಇದೀಗ ಹೊತ್ತಿದ್ದಾರೆ. </p>.<p>ವಿದ್ಯಾರ್ಥಿನಿ ರೇಖಾ ಪ್ರತಿಕ್ರಿಯಿಸಿ,‘ನಿರಂತರ ಅಧ್ಯಯನ, ಉಪನ್ಯಾಸಕರ ಮಾರ್ಗದರ್ಶನದಿಂದ ಗುರಿ ಸಾಧಿಸಲು ಸಾಧ್ಯವಾಗಿದೆ. ಅವರೆಲ್ಲರಿಗೂ ಸದಾ ಋಣಿಯಾಗಿರುತ್ತೇನೆ’ ಎಂದರು.</p>.<p>ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥರು, ಉಪನ್ಯಾಸಕರು ವಿದ್ಯಾರ್ಥಿನಿ ರೇಖಾ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>