<p><strong>ವಡಗೇರಾ</strong>: ತಾಲ್ಲೂಕಿನ ಪ್ರಸಿದ್ಧ ಗೋನಾಲ ಗ್ರಾಮದ ಆದಿಶಕ್ತಿ ದುರ್ಗಾದೇವಿ ಜಾತ್ರೆ ಮಂಗಳವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ 4 ಗಂಟೆಗೆ ಕೈಯಿಂದ ಪಾಯಸ ತಿರುಗಿಸುವ ಪವಾಡ ಕಾರ್ಯಕ್ರಮದ ಬಳಿಕ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಭಕ್ತರು ಬೇಡಿಕೊಂಡಿದ್ದ ಹರಕೆ, ಮಕ್ಕಳ ಜವಳ ಕಾರ್ಯ ನಡೆದವು. ಸಂಜೆ 5.30ಕ್ಕೆ ದುರ್ಗಾದೇವಿ ರಥೋತ್ಸವ ಸಂಭ್ರಮದಿಂದ ಜರುಗಿತು.</p>.<p>ಸರ್ವಾಲಂಕೃತ ತೇರು ಮುಂದೆ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಕಬ್ಬಿನ ತುಣುಕುಗಳನ್ನು ಎಸೆದು ಭಕ್ತಿ ಸಮರ್ಪಿಸಿದರು.</p>.<p>ರಥೋತ್ಸವದ ನಂತರ ಜೋಗುತಿ ಕುಣಿತ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಹಾಗೂ ದಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಸಮಿತಿ ಆಯೋಜಿಸಿತ್ತು. </p>.<p>ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ,ಗುಜರಾತ ಸೇರಿದಂತೆ ವಿವಿಧ ಭಾಗಗಳ ಭಕ್ತರು, ಜನಪ್ರತಿನಿಧಿಗಳು, ವಿವಿಧ ಪಕ್ಷದ ರಾಜಕೀಯ ಮುಖಂಡರು ಆಗಮಿಸಿದ್ದರು.</p>.<p>ಜಾತ್ರೆಯಲ್ಲಿ ಬೆಂಡು, ಬೆತಾಸು, ಮಂಡಾಳು, ಬೆಲ್ಲದ ಜಿಲೇಬಿ, ಖಾರಾ ಭಜಿ ಖರೀದಿ ಹಾಗೂ ಮಕ್ಕಳ ಆಟಿಕೆ ಸಾಮಾನುಗಳ ವ್ಯಾಪಾರ ಜೋರಾಗಿತ್ತು. ಮಕ್ಕಳು ಜೋಕಾಲಿ, ತೊಟ್ಟಿಲಿನಲ್ಲಿ ಕುಳಿತು ಕುಪ್ಪಳಿಸಿ ಸಂಭ್ರಮಿಸಿದರು.</p>.<p>ಪರಸ್ಥಳದಿಂದ ಬಂದ ಭಕ್ತರಿಗೆ ದೇವಸ್ಥಾನದ ವತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಯಾದಗಿರಿ ಸಿಪಿಐ ಸುನಿಲ್ ಮೂಲಿಮನಿ ಮಾರ್ಗದರ್ಶನದಲ್ಲಿ ವಡಗೇರಾ ಪಿಎಸ್ಐ ಮಹೆಬೂಬ್ ಅಲಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ತಾಲ್ಲೂಕಿನ ಪ್ರಸಿದ್ಧ ಗೋನಾಲ ಗ್ರಾಮದ ಆದಿಶಕ್ತಿ ದುರ್ಗಾದೇವಿ ಜಾತ್ರೆ ಮಂಗಳವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ 4 ಗಂಟೆಗೆ ಕೈಯಿಂದ ಪಾಯಸ ತಿರುಗಿಸುವ ಪವಾಡ ಕಾರ್ಯಕ್ರಮದ ಬಳಿಕ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಭಕ್ತರು ಬೇಡಿಕೊಂಡಿದ್ದ ಹರಕೆ, ಮಕ್ಕಳ ಜವಳ ಕಾರ್ಯ ನಡೆದವು. ಸಂಜೆ 5.30ಕ್ಕೆ ದುರ್ಗಾದೇವಿ ರಥೋತ್ಸವ ಸಂಭ್ರಮದಿಂದ ಜರುಗಿತು.</p>.<p>ಸರ್ವಾಲಂಕೃತ ತೇರು ಮುಂದೆ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಕಬ್ಬಿನ ತುಣುಕುಗಳನ್ನು ಎಸೆದು ಭಕ್ತಿ ಸಮರ್ಪಿಸಿದರು.</p>.<p>ರಥೋತ್ಸವದ ನಂತರ ಜೋಗುತಿ ಕುಣಿತ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಹಾಗೂ ದಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಸಮಿತಿ ಆಯೋಜಿಸಿತ್ತು. </p>.<p>ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ,ಗುಜರಾತ ಸೇರಿದಂತೆ ವಿವಿಧ ಭಾಗಗಳ ಭಕ್ತರು, ಜನಪ್ರತಿನಿಧಿಗಳು, ವಿವಿಧ ಪಕ್ಷದ ರಾಜಕೀಯ ಮುಖಂಡರು ಆಗಮಿಸಿದ್ದರು.</p>.<p>ಜಾತ್ರೆಯಲ್ಲಿ ಬೆಂಡು, ಬೆತಾಸು, ಮಂಡಾಳು, ಬೆಲ್ಲದ ಜಿಲೇಬಿ, ಖಾರಾ ಭಜಿ ಖರೀದಿ ಹಾಗೂ ಮಕ್ಕಳ ಆಟಿಕೆ ಸಾಮಾನುಗಳ ವ್ಯಾಪಾರ ಜೋರಾಗಿತ್ತು. ಮಕ್ಕಳು ಜೋಕಾಲಿ, ತೊಟ್ಟಿಲಿನಲ್ಲಿ ಕುಳಿತು ಕುಪ್ಪಳಿಸಿ ಸಂಭ್ರಮಿಸಿದರು.</p>.<p>ಪರಸ್ಥಳದಿಂದ ಬಂದ ಭಕ್ತರಿಗೆ ದೇವಸ್ಥಾನದ ವತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಯಾದಗಿರಿ ಸಿಪಿಐ ಸುನಿಲ್ ಮೂಲಿಮನಿ ಮಾರ್ಗದರ್ಶನದಲ್ಲಿ ವಡಗೇರಾ ಪಿಎಸ್ಐ ಮಹೆಬೂಬ್ ಅಲಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>