<p><strong>ಹನುಮಸಾಗರ</strong>: ಹನುಮಸಾಗರ, ಹನುಮನಾಳ, ಹೂಲಗೇರಿ, ಯರಗೇರಿ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವುದು ಶನಿವಾರ ಕಂಡುಬಂದಿತು.</p>.<p>ಸಾಮಾನ್ಯವಾಗಿ ಈ ಭಾಗದ ರೈತರು ಸೂರ್ಯಕಾಂತಿ, ಹೆಸರು, ತೊಗರಿ ಬಿತ್ತನೆಗೆ ಹೆಚ್ಚಿನ ಆದ್ಯತೆ ಕೊಟ್ಟಿರುವುದು ಕಂಡುಬಂದರೆ ಕಪ್ಪು ಭೂಮಿ ಹೊಂದಿರುವ ರೈತರು ಎಳ್ಳು ಹಾಗೂ ಹೆಸರು ಬಿತ್ತನೆ ಮಾಡುತ್ತಿರುವುದು ಕಂಡುಬಂತು.</p>.<p>ಈ ಬಾರಿ ಬಿತ್ತನೆಗೆ ಸೂಕ್ತವಾಗುವ ಸಮಯದಲ್ಲಿ ಮಳೆಯಾಗಿರುವುದರಿಂದ ರೈತರು ಸಾಮೂಹಿಕವಾಗಿ ಬಿತ್ತನೆ ಆರಂಭಿಸಿದ್ದಾರೆ. ಎತ್ತಿನ ಕೂರಗಿ ಪ್ರಮಾಣ ಕಡಿಮೆಯಾಗಿರುವುದರಿಂದ ಬಹುತೇಕ ರೈತರು ಟ್ರ್ಯಾಕ್ಟರ್ ಮೂಲಕ ಬಿತ್ತನೆ ನಡೆಸಿದ್ದಾರೆ.</p>.<p>ಗಡಚಿಂತಿ ಗ್ರಾಮದ ರೈತ ಮಹಾಂತೇಶ ಗರೇಬಾಳ ಮಾಹಿತಿ ನೀಡಿ,‘ಈ ಬಾರಿ ಮಳೆ ನಮಗೆ ವಿಶ್ವಾಸ ಮೂಡಿಸಿದೆ. ಮುಂದಿನ ಮಳೆ ಸರಿಯಾದ ಸಮಯಕ್ಕೆ ಸುರಿದರೆ ಕಪ್ಪು ಭೂಮಿಯಲ್ಲಿ ಎರಡು ಬೆಳೆ ಪಡೆದುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ</strong>: ಹನುಮಸಾಗರ, ಹನುಮನಾಳ, ಹೂಲಗೇರಿ, ಯರಗೇರಿ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವುದು ಶನಿವಾರ ಕಂಡುಬಂದಿತು.</p>.<p>ಸಾಮಾನ್ಯವಾಗಿ ಈ ಭಾಗದ ರೈತರು ಸೂರ್ಯಕಾಂತಿ, ಹೆಸರು, ತೊಗರಿ ಬಿತ್ತನೆಗೆ ಹೆಚ್ಚಿನ ಆದ್ಯತೆ ಕೊಟ್ಟಿರುವುದು ಕಂಡುಬಂದರೆ ಕಪ್ಪು ಭೂಮಿ ಹೊಂದಿರುವ ರೈತರು ಎಳ್ಳು ಹಾಗೂ ಹೆಸರು ಬಿತ್ತನೆ ಮಾಡುತ್ತಿರುವುದು ಕಂಡುಬಂತು.</p>.<p>ಈ ಬಾರಿ ಬಿತ್ತನೆಗೆ ಸೂಕ್ತವಾಗುವ ಸಮಯದಲ್ಲಿ ಮಳೆಯಾಗಿರುವುದರಿಂದ ರೈತರು ಸಾಮೂಹಿಕವಾಗಿ ಬಿತ್ತನೆ ಆರಂಭಿಸಿದ್ದಾರೆ. ಎತ್ತಿನ ಕೂರಗಿ ಪ್ರಮಾಣ ಕಡಿಮೆಯಾಗಿರುವುದರಿಂದ ಬಹುತೇಕ ರೈತರು ಟ್ರ್ಯಾಕ್ಟರ್ ಮೂಲಕ ಬಿತ್ತನೆ ನಡೆಸಿದ್ದಾರೆ.</p>.<p>ಗಡಚಿಂತಿ ಗ್ರಾಮದ ರೈತ ಮಹಾಂತೇಶ ಗರೇಬಾಳ ಮಾಹಿತಿ ನೀಡಿ,‘ಈ ಬಾರಿ ಮಳೆ ನಮಗೆ ವಿಶ್ವಾಸ ಮೂಡಿಸಿದೆ. ಮುಂದಿನ ಮಳೆ ಸರಿಯಾದ ಸಮಯಕ್ಕೆ ಸುರಿದರೆ ಕಪ್ಪು ಭೂಮಿಯಲ್ಲಿ ಎರಡು ಬೆಳೆ ಪಡೆದುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>