<p><strong>ಹನುಮಸಾಗರ:</strong> ಭಾನುವಾರ ಮಧ್ಯಾಹ್ನ ಸುಮಾರು 20 ನಿಮಿಷ ಮಳೆ ಸುರಿಯಿತು. ರಸ್ತೆಗಳ ಮೇಲೆ ನೀರು ಹರಿಯಿತು.</p>.<p>ಸಮೀಪದ ಮಲಕಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಮುದುಕಪ್ಪ ಜೂಲಕಟ್ಟಿ ಎಂಬುವವರಿಗೆ ಸೇರಿದ ಮೇವಿನ ಬಣವೆ ಭಸ್ಮವಾಗಿದೆ.</p>.<p>‘ಬೆಂಕಿ ನಂದಿಸಲು ಪ್ರkoಯತ್ನಿಸಲಾಯಿತು. ಸಾಧ್ಯವಾಗಲಿಲ್ಲ. ರೈತನಿಗೆ ₹30 ಸಾವಿರ ನಷ್ಟವಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಗ್ರಾಮಸ್ಥ ರಮೇಶ ಒತ್ತಾಯಿಸಿದರು.</p>.<p>ದೊಡ್ಡ ಪ್ರಮಾಣದಲ್ಲಿ ಗಾಳಿ ಬೀಸಿದ ಕಾರಣ ಅಲ್ಲಲ್ಲಿ ಮನೆಗಳ ಹೆಂಚು ಹಾರಿ ಹೋಗಿವೆ. ಬಣವೆಗಳ ಮೇವು ಚಲ್ಲಾಪಿಲ್ಲಿಯಾಗಿ ಬಿದ್ದಿದೆ.</p>.<p>‘ಇನ್ನು ಅರ್ಧಗಂಟೆ ಮಳೆ ಸುರಿದಿದ್ದರೆ ಕೆರೆಕಟ್ಟೆಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಜಾನುವಾರುಗಳಿಗೆ ಅನುಕೂಲವಾಗುತ್ತಿತ್ತು. ಅಲ್ಲದೆ, ಜಮೀನುಗಳನ್ನೂ ಹದ ಮಾಡಿಕೊಳ್ಳಬಹುದಾಗಿತ್ತು’ ಎಂದು ರೈತ ದೇವಪ್ಪ ಮಾವಿನಇಟಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ:</strong> ಭಾನುವಾರ ಮಧ್ಯಾಹ್ನ ಸುಮಾರು 20 ನಿಮಿಷ ಮಳೆ ಸುರಿಯಿತು. ರಸ್ತೆಗಳ ಮೇಲೆ ನೀರು ಹರಿಯಿತು.</p>.<p>ಸಮೀಪದ ಮಲಕಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಮುದುಕಪ್ಪ ಜೂಲಕಟ್ಟಿ ಎಂಬುವವರಿಗೆ ಸೇರಿದ ಮೇವಿನ ಬಣವೆ ಭಸ್ಮವಾಗಿದೆ.</p>.<p>‘ಬೆಂಕಿ ನಂದಿಸಲು ಪ್ರkoಯತ್ನಿಸಲಾಯಿತು. ಸಾಧ್ಯವಾಗಲಿಲ್ಲ. ರೈತನಿಗೆ ₹30 ಸಾವಿರ ನಷ್ಟವಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು’ ಎಂದು ಗ್ರಾಮಸ್ಥ ರಮೇಶ ಒತ್ತಾಯಿಸಿದರು.</p>.<p>ದೊಡ್ಡ ಪ್ರಮಾಣದಲ್ಲಿ ಗಾಳಿ ಬೀಸಿದ ಕಾರಣ ಅಲ್ಲಲ್ಲಿ ಮನೆಗಳ ಹೆಂಚು ಹಾರಿ ಹೋಗಿವೆ. ಬಣವೆಗಳ ಮೇವು ಚಲ್ಲಾಪಿಲ್ಲಿಯಾಗಿ ಬಿದ್ದಿದೆ.</p>.<p>‘ಇನ್ನು ಅರ್ಧಗಂಟೆ ಮಳೆ ಸುರಿದಿದ್ದರೆ ಕೆರೆಕಟ್ಟೆಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಜಾನುವಾರುಗಳಿಗೆ ಅನುಕೂಲವಾಗುತ್ತಿತ್ತು. ಅಲ್ಲದೆ, ಜಮೀನುಗಳನ್ನೂ ಹದ ಮಾಡಿಕೊಳ್ಳಬಹುದಾಗಿತ್ತು’ ಎಂದು ರೈತ ದೇವಪ್ಪ ಮಾವಿನಇಟಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>