‘ಈಗ ಟಿಕೆಟ್ ನೀಡಲು ಅವಕಾಶ ಇತ್ತು. ಆದರೆ ಪಕ್ಷದ ನಿರ್ಧಾರವನ್ನು ಗೌರವಿಸಬೇಕು. ತಮ್ಮ ಸ್ಥಾನವನ್ನು ತ್ಯಾಗ ಮಾಡಿ, ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ ಯಾವಾಗಲು ಗೌರವ ಕೊಡುತ್ತೇವೆ. ಕೋರ್ ಕಮೀಟಿ ಸಭೆಯಲ್ಲಿ ವಿಶ್ವನಾಥ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಅದನ್ನೆಲ್ಲ ಹೊರಗೆ ಹೇಳಲಾಗುವುದಿಲ್ಲ.ಟಿಕೆಟ್ ಹಂಚಿಕೆಯಲ್ಲಿ ಷಡ್ಯಂತ್ರ ನಡೆಸಲಾಗಿದೆ ಎಂಬ ವಿಶ್ವನಾಥ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದರು.