ಈ ಬಾರಿ ಒಟ್ಟು 7,500 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ ಸುಮಾರು 5,500-6000 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಹನುಮನಾಳ ಹೋಬಳಿಯಲ್ಲಿ ಅತಿ ಹೆಚ್ಚು ರೈತರು ಹೆಸರು ಬಿತ್ತನೆ ಮಾಡಿದ್ದಾರೆ. ಸದ್ಯ ಒಂದೂವರೆ ತಿಂಗಳ ಅವಧಿಯ ಹೆಸರು ಬೆಳೆ ಕಾಯಿಕಟ್ಟುವ ಹಂತದಲ್ಲಿದೆ. ಇನ್ನೂ ಒಂದು ತಿಂಗಳಲ್ಲಿ ಕಟಾವಿಗೆ ಬರುತ್ತದೆ. ಈಗ ತೇವಾಂಶ ಕೊರತೆ ಇದ್ದು, ಈ ವಾರದೊಳಗೆ ಮಳೆಯಾದರೆ ಬೆಳೆಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದರು.