<p><strong>ಕೊಪ್ಪಳ:</strong> ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಇಲ್ಲಿನ ಭಾಗ್ಯನಗರ ಶಾಖೆಯ ಜೂನಿಯರ್ ಸಹಾಯಕ ಅಧಿಕಾರಿ ಜಿ.ಮಂಜುನಾಥ ಎಂಬುವವರ ಮೇಲಿನ ಆರೋಪ ಸಾಬೀತಾಗಿದ್ದು ಇಲ್ಲಿನ ಸಿಜೆಎಂ ನ್ಯಾಯಾಲಯವು ಅಪರಾಧಿಗೆ ಏಳು ವರ್ಷ ಸಾಧಾರಣ ಜೈಲು ಹಾಗೂ ₹10 ಸಾವಿರ ದಂಡ ವಿಧಿಸಿದೆ. </p><p>2002-03ನೇ ಸಾಲಿನಲ್ಲಿ ಭಾಗ್ಯನಗರ ಶಾಖೆಯಲ್ಲಿ ಹಾಸನ ಜಿಲ್ಲೆಯ ಗೋರೂರಿನ ಮಂಜುನಾಥ ಕೆಲಸ ಮಾಡುತ್ತಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡು ₹2.12 ಲಕ್ಷ ಮೌಲ್ಯದ ಮಗ್ಗಕ್ಕೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಿ ಬಂದಿದ್ದ ₹2.12 ಲಕ್ಷ ಪಡೆದು ಸ್ವಂತಕ್ಕೆ ಬಳಸಿಕೊಂಡಿದ್ದರು. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 2005ರಲ್ಲಿ ಪ್ರಕರಣ ದಾಖಲಾಗಿತ್ತು.</p><p>ಪ್ರಕರಣದ ತನಿಖೆ ನಡೆಸಿದ್ದ ಆಗಿನ ತನಿಖಾಧಿಕಾರಿ ಪೊಲೀಸ್ ಇನ್ಸ್ಟೆಕ್ಟರ್ ಶಿವಲಿಂಗರಾಧ್ಯ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮಲ್ಕಾರಿ ರಾಮಪ್ಪ ಒಡೆಯರ್ ಅವರು ಈ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಇಲ್ಲಿನ ಭಾಗ್ಯನಗರ ಶಾಖೆಯ ಜೂನಿಯರ್ ಸಹಾಯಕ ಅಧಿಕಾರಿ ಜಿ.ಮಂಜುನಾಥ ಎಂಬುವವರ ಮೇಲಿನ ಆರೋಪ ಸಾಬೀತಾಗಿದ್ದು ಇಲ್ಲಿನ ಸಿಜೆಎಂ ನ್ಯಾಯಾಲಯವು ಅಪರಾಧಿಗೆ ಏಳು ವರ್ಷ ಸಾಧಾರಣ ಜೈಲು ಹಾಗೂ ₹10 ಸಾವಿರ ದಂಡ ವಿಧಿಸಿದೆ. </p><p>2002-03ನೇ ಸಾಲಿನಲ್ಲಿ ಭಾಗ್ಯನಗರ ಶಾಖೆಯಲ್ಲಿ ಹಾಸನ ಜಿಲ್ಲೆಯ ಗೋರೂರಿನ ಮಂಜುನಾಥ ಕೆಲಸ ಮಾಡುತ್ತಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡು ₹2.12 ಲಕ್ಷ ಮೌಲ್ಯದ ಮಗ್ಗಕ್ಕೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಿ ಬಂದಿದ್ದ ₹2.12 ಲಕ್ಷ ಪಡೆದು ಸ್ವಂತಕ್ಕೆ ಬಳಸಿಕೊಂಡಿದ್ದರು. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 2005ರಲ್ಲಿ ಪ್ರಕರಣ ದಾಖಲಾಗಿತ್ತು.</p><p>ಪ್ರಕರಣದ ತನಿಖೆ ನಡೆಸಿದ್ದ ಆಗಿನ ತನಿಖಾಧಿಕಾರಿ ಪೊಲೀಸ್ ಇನ್ಸ್ಟೆಕ್ಟರ್ ಶಿವಲಿಂಗರಾಧ್ಯ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮಲ್ಕಾರಿ ರಾಮಪ್ಪ ಒಡೆಯರ್ ಅವರು ಈ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>