ನಗರದಲ್ಲಿ ಭಾನುವಾರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪೊಲೀಸರು ಪಕ್ಷಗಳ ಹಾಗೂ ಸರ್ಕಾರದ ಒತ್ತಡಕ್ಕೆ ಮಣಿದು, ಸಿರಾಜ್ ಹಾಗೂ ರಾಜಾಭಕ್ಷಿ ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಪೊಲೀಸರು ಸರ್ಕಾರದ ಪರವಾಗಿ ಕೆಲಸ ಮಾಡಬಾರದು. ಕಾನೂನಿನ ಪರವಾಗಿ ಕೆಲಸ ಮಾಡಬೇಕು. ಇದು ಒಬ್ಬ ವ್ಯಕ್ತಿಯ ಸಮಸ್ಯೆಯ ಅಲ್ಲ. ದೇಶದ ಪ್ರತಿಯೊಬ್ಬ ವ್ಯಕ್ತಿಗೆ ಸಂಬಂಧಿಸಿದ ಸಮಸ್ಯೆ ಎಂದರು.