ಬೈರನಾಯಕನಹಳ್ಳಿ ಗ್ರಾಮದವರು ತಮ್ಮ ಗ್ರಾಮವನ್ನು ಕುದುರಿಮೋತಿ ಗ್ರಾಮ ಪಂಚಾಯಿತಿಯಿಂದ ನೆಲಜೇರಿ ಗ್ರಾಮ ಪಂಚಾಯಿತಿಗೆ ಸೇರಿಸಬೇಕು ಎಂದು ಬಹಳ ದಿನಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಬೇಕೆಂದೂ ತೀರ್ಮಾನಿಸಿದ್ದರು. ಅದನ್ನು ಮನಗಂಡ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು ಗ್ರಾಮದಲ್ಲಿ ಸಭೆ ನಡೆಸಿ ಸಾರ್ವಜನಿಕರ ಜತೆ ಮಾತನಾಡಿ ಚುನಾವಣೆಯನ್ನು ಬಹಿಷ್ಕರಿಸಬೇಡಿ, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ತಿಳಿಸಿದರು.