<p><strong>ಕುಕನೂರು: </strong>ತಾಲ್ಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಹಾಗೂ ಚುನಾವಣಾ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಬುಧವಾರ ಸಭೆ ನಡೆಸಿದರು.</p>.<p>ಬೈರನಾಯಕನಹಳ್ಳಿ ಗ್ರಾಮದವರು ತಮ್ಮ ಗ್ರಾಮವನ್ನು ಕುದುರಿಮೋತಿ ಗ್ರಾಮ ಪಂಚಾಯಿತಿಯಿಂದ ನೆಲಜೇರಿ ಗ್ರಾಮ ಪಂಚಾಯಿತಿಗೆ ಸೇರಿಸಬೇಕು ಎಂದು ಬಹಳ ದಿನಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಬೇಕೆಂದೂ ತೀರ್ಮಾನಿಸಿದ್ದರು. ಅದನ್ನು ಮನಗಂಡ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು ಗ್ರಾಮದಲ್ಲಿ ಸಭೆ ನಡೆಸಿ ಸಾರ್ವಜನಿಕರ ಜತೆ ಮಾತನಾಡಿ ಚುನಾವಣೆಯನ್ನು ಬಹಿಷ್ಕರಿಸಬೇಡಿ, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಚುನಾವಣಾ ನೋಡಲ್ ಅಧಿಕಾರಿ ಸಿದ್ದೇಶ ಹಾಗೂ ಪಿಎಸ್ಐ ಶೀಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು: </strong>ತಾಲ್ಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಹಾಗೂ ಚುನಾವಣಾ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಬುಧವಾರ ಸಭೆ ನಡೆಸಿದರು.</p>.<p>ಬೈರನಾಯಕನಹಳ್ಳಿ ಗ್ರಾಮದವರು ತಮ್ಮ ಗ್ರಾಮವನ್ನು ಕುದುರಿಮೋತಿ ಗ್ರಾಮ ಪಂಚಾಯಿತಿಯಿಂದ ನೆಲಜೇರಿ ಗ್ರಾಮ ಪಂಚಾಯಿತಿಗೆ ಸೇರಿಸಬೇಕು ಎಂದು ಬಹಳ ದಿನಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಬೇಕೆಂದೂ ತೀರ್ಮಾನಿಸಿದ್ದರು. ಅದನ್ನು ಮನಗಂಡ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರು ಗ್ರಾಮದಲ್ಲಿ ಸಭೆ ನಡೆಸಿ ಸಾರ್ವಜನಿಕರ ಜತೆ ಮಾತನಾಡಿ ಚುನಾವಣೆಯನ್ನು ಬಹಿಷ್ಕರಿಸಬೇಡಿ, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ತಿಳಿಸಿದರು.</p>.<p>ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಚುನಾವಣಾ ನೋಡಲ್ ಅಧಿಕಾರಿ ಸಿದ್ದೇಶ ಹಾಗೂ ಪಿಎಸ್ಐ ಶೀಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>