ತಾಲ್ಲೂಕಿನ ತಿಪ್ಪರಸನಾಳ ರೈತಾಪಿ ವರ್ಗಗಳ ಕುಟುಂಬಗಳು ಹೆಚ್ಚಾಗಿರುವ ಗ್ರಾಮ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ವಿಶಾಲ ಪ್ರದೇಶದಲ್ಲಿ ಹಚ್ಚ ಹಸಿರ ಪರಿಸರ ಹೊತ್ತು ನಿಂತಿದೆ. ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಲು, ಅವರಿಗೆ ಪರಿಸರದ ಬಗ್ಗೆ ಕಾಳಜಿ, ಆಸಕ್ತಿ ಮೂಡುವಂತೆ ಮಾಡುವ ಉದ್ದೇಶದಿಂದ ಹಾಗೂ ಶಾಲೆಯ ಆವರಣವನ್ನು ಉತ್ತಮ ಪರಿಸರವನ್ನಾಗಿ ಮಾಡಲು ಶಾಲೆಯ ಶಿಕ್ಷಕ ವರ್ಗದವರು ವಿದ್ಯಾರ್ಥಿಗಳೊಡಗೂಡಿ ಸಸಿ ನೆಟ್ಟು ಗಿಡ ಬೆಳಿಸಿದ್ದಾರೆ ಎಂದು ಎಸ್ಡಿಎಂಸಿ ಅಧ್ಯಕ್ಷ ಕುಮಾರಸ್ವಾಮಿ ಅಂಗಡಿ ಹೇಳುತ್ತಾರೆ.