ಕುಕನೂರು: ‘ಕ್ರೀಡೆಯಲ್ಲಿ ಸೋಲು–ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ’ ಎಂದು ಯುವ ಮುಖಂಡ ಅನಿಲ ಆಚಾರ ಹೇಳಿದರು.
ತಾಲ್ಲೂಕಿನ ಬಳಗೇರಿ ಗ್ರಾಮದ ಬಳ್ಳೇಶ್ವರ ಯುವಕ ಸಂಘದ ವತಿಯಿಂದ ನಡೆದ ಕಬಡ್ಡಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ. ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪೋಷಕರು ಉತ್ತೇಜನ ನೀಡಬೇಕು. ಮಕ್ಕಳಿಗೆ ಆಸಕ್ತಿಯಿರುವ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ಹೇಳಿದರು.
ಪ್ರತಿಯೊಬ್ಬರು ಕ್ರೀಡಾ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.