<p><strong>ಕೊಪ್ಪಳ</strong>: ಸೇವೆ ಕಾಯಂಗೆ ಆಗ್ರಹಿಸಿ ಹಲವು ದಿನಗಳಿಂದ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿಗೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಧರಣಿ ನಿರತ ಅತಿಥಿ ಉಪನ್ಯಾಸಕರನ್ನು ಸೋಮವಾರ ಭೇಟಿ ಮಾಡಿದ ಜೆಡಿಎಸ್ನ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ‘ಅತಿಥಿ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಗೌರವಧನ ₹5,000 ಹೆಚ್ಚಿಸಿದ್ದರು. ರಾಜಕೀಯದ ಕೆಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅದು ಜಾರಿಯಾಗಲಿಲ್ಲ. ಹಲವು ಗ್ಯಾರಂಟಿ ಜಾರಿಗೊಳಿಸಿರುವ ಈ ಸರಕಾರಕ್ಕೆ ಅತಿಥಿ ಉಪನ್ಯಾಸಕರ ಸೇವಾ ಕಾಯಂ ಹೊರೆಯಲ್ಲ’ ಎಂದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನ ದುಪ್ಪಟ್ಟು ಹೆಚ್ಚಿಸಲಾಗಿತ್ತು. ಶಿಕ್ಷಣ ವ್ಯವಸ್ಥೆಯಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದು. ಅಧಿವೇಶನದಲ್ಲಿ ಈ ಸಮಸ್ಯೆ ಕುರಿತು ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ನ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವೆ’ ಎಂದರು.</p>.<p>ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಹೇಶ ಗೋವನಕೊಪ್ಪ ಸೇರಿದಂತೆ ಅನೇಕರು ಇದ್ದರು.</p>.<p><strong>ಬೆಂಬಲ</strong>: ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಂಜುನಾಥ ಗೊಂಡಬಾಳ, ಸಲೀಂ ಅಳವಂಡಿ, ಶ್ರೀನಿವಾಸ ಪಂಡಿತ್ ಹಾಗೂ ಗಂಗಾಧರ ಕಬ್ಬೇರ ಧರಣಿ ನಿರತ ಅತಿಥಿ ಉಪನ್ಯಾಸಕರಿಗೆ ಬೆಂಬಲ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಷನ್ ರಾಜ್ಯ ಸಮಿತಿ ಬೆಂಬಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಸೇವೆ ಕಾಯಂಗೆ ಆಗ್ರಹಿಸಿ ಹಲವು ದಿನಗಳಿಂದ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿಗೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಧರಣಿ ನಿರತ ಅತಿಥಿ ಉಪನ್ಯಾಸಕರನ್ನು ಸೋಮವಾರ ಭೇಟಿ ಮಾಡಿದ ಜೆಡಿಎಸ್ನ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ‘ಅತಿಥಿ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಗೌರವಧನ ₹5,000 ಹೆಚ್ಚಿಸಿದ್ದರು. ರಾಜಕೀಯದ ಕೆಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅದು ಜಾರಿಯಾಗಲಿಲ್ಲ. ಹಲವು ಗ್ಯಾರಂಟಿ ಜಾರಿಗೊಳಿಸಿರುವ ಈ ಸರಕಾರಕ್ಕೆ ಅತಿಥಿ ಉಪನ್ಯಾಸಕರ ಸೇವಾ ಕಾಯಂ ಹೊರೆಯಲ್ಲ’ ಎಂದರು.</p>.<p>‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನ ದುಪ್ಪಟ್ಟು ಹೆಚ್ಚಿಸಲಾಗಿತ್ತು. ಶಿಕ್ಷಣ ವ್ಯವಸ್ಥೆಯಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದು. ಅಧಿವೇಶನದಲ್ಲಿ ಈ ಸಮಸ್ಯೆ ಕುರಿತು ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ನ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವೆ’ ಎಂದರು.</p>.<p>ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಹೇಶ ಗೋವನಕೊಪ್ಪ ಸೇರಿದಂತೆ ಅನೇಕರು ಇದ್ದರು.</p>.<p><strong>ಬೆಂಬಲ</strong>: ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮಂಜುನಾಥ ಗೊಂಡಬಾಳ, ಸಲೀಂ ಅಳವಂಡಿ, ಶ್ರೀನಿವಾಸ ಪಂಡಿತ್ ಹಾಗೂ ಗಂಗಾಧರ ಕಬ್ಬೇರ ಧರಣಿ ನಿರತ ಅತಿಥಿ ಉಪನ್ಯಾಸಕರಿಗೆ ಬೆಂಬಲ ವ್ಯಕ್ತಪಡಿಸಿದರು. ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಷನ್ ರಾಜ್ಯ ಸಮಿತಿ ಬೆಂಬಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>